ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Thursday, June 16, 2011

ಹೇಳಿ ಹೋಗು ಕಾರಣ

ಹೇಳಿ ಹೋಗು ಕಾರಣ ಹೋಗುವ ಮೊದಲು
ನನ್ನ ಬಾಳಿನಿಂದ ದೂರಾಗುವ ಮೊದಲು

ಒಲವೆಂಬ ಹಣತೆ ಎದೆಯಲ್ಲಿ ಬೆಳಗಿ
ಬೆಳಕಾದೆ ಬಾಳಿಗೆ
ಇಂದೇಕೆ ಹೀಗೆ ಬೆಳಕನ್ನು ತೊರೆದು
ನೀ ಸರಿದೆ ನೆರಳಿಗೆ ?
ಇಂದ್ಯಾವ ಬಂಧ ತೊಡರಿದೆ
ನಿನ್ನ ಕಾಲಿಗೆ ?
ಸುಡುಬೆಂಕಿ ಬೆಳಕು ಉಳಿಯಿತೆ
ನನ್ನ ಪಾಲಿಗೆ ?

ಸವಿಭಾವಗಳಿಗೆ ನೀ ನಾದ ನೀಡಿ
ಜೊತೆಗೂಡಿ ಹಾಡಿದೆ
ಇಂದ್ಯಾವ ಅಳಲು ? ಸೆರೆಯುಬ್ಬಿ ಕೊರಳು
ನೀ ಮೌನ ತಾಳಿದೆ
ನೀ ನೆಟ್ಟು ಬೆಳೆಸಿದ ಈ ಮರ
ಫಲ ತೊಟ್ಟ ವೇಳೆಗೆ
ಹೀಗೇಕೆ ಮುರಿದು ಉರುಳಿದೆ
ಯಾವ ದಾಳಿಗೆ ?

-- ಬಿ.ಆರ್. ಲಕ್ಷ್ಮಣರಾವ್

No comments:

Post a Comment