Thursday, June 16, 2011

ಹೇಳಿ ಹೋಗು ಕಾರಣ

ಹೇಳಿ ಹೋಗು ಕಾರಣ ಹೋಗುವ ಮೊದಲು
ನನ್ನ ಬಾಳಿನಿಂದ ದೂರಾಗುವ ಮೊದಲು

ಒಲವೆಂಬ ಹಣತೆ ಎದೆಯಲ್ಲಿ ಬೆಳಗಿ
ಬೆಳಕಾದೆ ಬಾಳಿಗೆ
ಇಂದೇಕೆ ಹೀಗೆ ಬೆಳಕನ್ನು ತೊರೆದು
ನೀ ಸರಿದೆ ನೆರಳಿಗೆ ?
ಇಂದ್ಯಾವ ಬಂಧ ತೊಡರಿದೆ
ನಿನ್ನ ಕಾಲಿಗೆ ?
ಸುಡುಬೆಂಕಿ ಬೆಳಕು ಉಳಿಯಿತೆ
ನನ್ನ ಪಾಲಿಗೆ ?

ಸವಿಭಾವಗಳಿಗೆ ನೀ ನಾದ ನೀಡಿ
ಜೊತೆಗೂಡಿ ಹಾಡಿದೆ
ಇಂದ್ಯಾವ ಅಳಲು ? ಸೆರೆಯುಬ್ಬಿ ಕೊರಳು
ನೀ ಮೌನ ತಾಳಿದೆ
ನೀ ನೆಟ್ಟು ಬೆಳೆಸಿದ ಈ ಮರ
ಫಲ ತೊಟ್ಟ ವೇಳೆಗೆ
ಹೀಗೇಕೆ ಮುರಿದು ಉರುಳಿದೆ
ಯಾವ ದಾಳಿಗೆ ?

-- ಬಿ.ಆರ್. ಲಕ್ಷ್ಮಣರಾವ್

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...