Tuesday, June 7, 2011

ಒಂದು ಮರಿಮೀನಿಗೆ!

ಕಾರ್ಮುಗಿಲು ಆಗಸದ ತುಂಬ ಗೇರಾಯಿಸಿ
ಬೇಸಿಗೆಯ ತುದಿಗೆ ಮತ್ತೊಂದು ಉರುಬು!
ಒಣ ಧಗೆ-ಗಮ್ಮು-ಜೂಬರಿಕೆ-ಎಂಥದೊ ಜಡ್ಡು.
ತೂಗು ನಾಲಗೆ ಬಿದ್ದ ಗಂಟೆ ಕೊರಳು!

ಫಳ್ಳೆನುವ ಮಿಂಚು! ನಡು ನಡುವೆ ಸಿಡಿಮಿಡಿ ಗುಡುಗು
ಒಮ್ಮೆಗೇ ಆಹಾ! ತಂಗಾಳಿ ನುಗ್ಗು!
ಮೊದಲು ಹನಿ ಹನಿ ಚುಮುಕು. ಕೊನೆಗೆ ತಡಬಡವಿರದ
ಸುರಿತ. ಹೂವಾಗುವುದು ಎದೆಯ ಮೊಗ್ಗು!

ಅಂತರಾಳದ ತುಂಬ ನೆಲದ ಮಾದಕ ಗಂಧ
ನೆನೆಮಳೆಗೆ ಕಾದ ಮೈತುಂಬ ಝಳಕ
ಮಳೆಗಾಲ ಕಳೆಯಿತೋ ಮತ್ತದೇ ಒಣ ಬಾನು
ಇನ್ನೊಂದು ಮಳೆಗಾಲ ಬರುವ ತನಕ.

ಒಂದು ಮರಿಮೀನಿಗೆಷ್ಟಗಲ ಆಕಾಶ ಬಲೆ!
ಚುಕ್ಕಿ ಹುಳ ಚುಚ್ಚಿರುವ ಚಂದ್ರಗಾಳ!


No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......