Tuesday, June 7, 2011

ಒಂದು ಮರಿಮೀನಿಗೆ!

ಕಾರ್ಮುಗಿಲು ಆಗಸದ ತುಂಬ ಗೇರಾಯಿಸಿ
ಬೇಸಿಗೆಯ ತುದಿಗೆ ಮತ್ತೊಂದು ಉರುಬು!
ಒಣ ಧಗೆ-ಗಮ್ಮು-ಜೂಬರಿಕೆ-ಎಂಥದೊ ಜಡ್ಡು.
ತೂಗು ನಾಲಗೆ ಬಿದ್ದ ಗಂಟೆ ಕೊರಳು!

ಫಳ್ಳೆನುವ ಮಿಂಚು! ನಡು ನಡುವೆ ಸಿಡಿಮಿಡಿ ಗುಡುಗು
ಒಮ್ಮೆಗೇ ಆಹಾ! ತಂಗಾಳಿ ನುಗ್ಗು!
ಮೊದಲು ಹನಿ ಹನಿ ಚುಮುಕು. ಕೊನೆಗೆ ತಡಬಡವಿರದ
ಸುರಿತ. ಹೂವಾಗುವುದು ಎದೆಯ ಮೊಗ್ಗು!

ಅಂತರಾಳದ ತುಂಬ ನೆಲದ ಮಾದಕ ಗಂಧ
ನೆನೆಮಳೆಗೆ ಕಾದ ಮೈತುಂಬ ಝಳಕ
ಮಳೆಗಾಲ ಕಳೆಯಿತೋ ಮತ್ತದೇ ಒಣ ಬಾನು
ಇನ್ನೊಂದು ಮಳೆಗಾಲ ಬರುವ ತನಕ.

ಒಂದು ಮರಿಮೀನಿಗೆಷ್ಟಗಲ ಆಕಾಶ ಬಲೆ!
ಚುಕ್ಕಿ ಹುಳ ಚುಚ್ಚಿರುವ ಚಂದ್ರಗಾಳ!


No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...