Friday, July 1, 2011

ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು

ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು
ಬಳಸಿಕೊಂಡೆವದನೆ ನಾವು ಅದಕು ಇದಕು ಎದಕು || ನಾನು ||


ಹತ್ತಿರಿರಲಿ ದೂರವಿರಲಿ ಅವನೇ ರಂಗಸಾಲೆ
ಕಣ್ಣು ಕಟ್ಟುವಂಥ ಮೂರ್ತಿ ಕಿವಿಗೆ ಮೆಚ್ಚಿನೋಲೆ || ನಾನು ||


ಆತ ಕೊಟ್ಟ ವಸ್ತು ಒಡವೆ ನನಗೆ ಅವಗೆ ಗೊತ್ತು
ತೋಳುಗಳಿಗೆ ತೋಳಬಂಧಿ ಕೆನ್ನೆತುಂಬ ಮುತ್ತು || ನಾನು ||


ಕುಂದು ಕೊರತೆ ತೋರಲಿಲ್ಲ ಬೇಕು ಹೆಚ್ಚಿಗೇನು
ಹೊಟ್ಟೆಗಿತ್ತ ಜೀವಫಲವ ತುಟಿಗೆ ಹಾಲು ಜೇನು || ನಾನು ||

No comments:

Post a Comment

ಕರಗಿತು ಕಂಪಿನ ಕರ್ಪೂರ... - ಮಹೇಶ ಭಟ್ಟ ಆರ್. ಹಾರ್ಯಾಡಿ

ಮೊನ್ನೆಯ ದಿನ (೧೦.೦೪.೨೬) ಬೆಳಗ್ಗೆ ನಾನು ಕಾಲೇಜಿಗೆ ಸೇರಿಕೊಂಡ ಸ್ವಲ್ಪ ಹೊತ್ತಿನಲ್ಲೇ ನನ್ನ ಶ್ರೀಮತಿ ಕರೆಮಾಡಿ 'ನಾಡೋಜ ಎಸ್. ಆರ್. ರಾಮಸ್ವಾಮಿ ಅವರು ಭೌತಿಕವಾಗಿ ...