Tuesday, July 12, 2011

ದೂರವಿಡೆ ಸಖಿ

ದೂರವಿಡೆ ಸಖಿ
ದೂರವಿಡೆ |
ಕೈಯವೀಣೆಯನು ದೂರವಿಡೆ ||

ವೀಣೆಯ ನಾದವ ಕೇಳಿ ಚಂದ್ರಮನ
ರಥದ ಜಿಂಕೆಗಳು ಓಡದಿವೆ |
ನೆರಳು ಹೊರಳುತಿದೆ ; ಇರುಳು ಕೆರಳುತಿದೆ
ಬೆಳದಿಂಗಳ ಮಳೆ ಬಾರದಿದೆ ||

ನೋವಿನ ಪರಿಯನು ನೊಂದವರರಿವರು
ನೋಯದೆ ನೋಯುವ ಬಗೆಯುಂಟೆ ?
ಚಂದಿರನಾದನು ಬೆಂಕಿಯ ಗೂಡು
ನೊಂದ ಬಳಿಕ ನೀನದ ನೋಡು ||

ಮರುಳುಗೊಳ್ಳುವುವು ಚುಕ್ಕಿಯ ಜಿಂಕೆ
ವೀಣೆಯ ಮುಚ್ಚಿಡೆ ಜೀವಸಖೀ |
ಚಂದ್ರ ಮಹೋತ್ಸವ ಮುಂದಕೆ ಸಾಗಲಿ
ವಿರಹಿಗಳಿಗೆ ಕಾರಿರುಳೆ ಸಖೀ ||

- ಹೆಚ್. ಎಸ್. ವೆಂಕಟೇಶಮೂರ್ತಿ

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...