Thursday, July 14, 2011

ಇರುಳ ಸಮಯ

ಇರುಳ ಸಮಯ ಸುರಿಮಳೆಯೊಳಗೆ
ದೋಣಿಗಳಿಳಿದಿವೆ ಹೊಳೆಯೊಳಗೆ

ಶ್ಯಾಮಲ ಸಾಗರವೇ ಗುರಿಯೆನ್ನುತ
ಸಾಗಿವೆ ಸಾವಿರ ದೋಣಿಗಳು |
ಸೆರಗೇ ಹಾಯಿ ! ಹೃದಯವೆ ಹುಟ್ಟು !
ದೋಣಿ ಹಿಂದೆ ಜಲವೇಣಿಗಳು ||

ಏರಿಳಿಯುವ ಅಲೆ! ಮುಂದೆ ಇದಿರು ಹೊಳೆ !
ಜಗ್ಗುವುವೇ ಈ ಹಾಯಿಗಳು ?
ಎದೆಯನೆ ಸೀಳುವ ಹೋಳು ಬಂಡೆಗಳು
ಆ ಎನ್ನುವ ಸುಳಿಬಾಯಿಗಳು ||

ಮುಳುಗಿಸೊ ಅಥವಾ ತೇಲಿಸೊ ರಥವ
ಧೃತಿಯೊಂದೇ ಗತಿ ಹಾಡುತಿವೆ |
ಮುಳುಗುವ ಹೊರತೂ ತೇಲದು ದೋಣಿ
ಹಾಯಿ ವಿದಾಯವ ಹೇಳುತಿವೆ ||

-ಹೆಚ್. ಎಸ್. ವೆಂಕವೇಶಮೂರ್ತಿ

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...