Thursday, July 14, 2011

ಇರುಳ ಸಮಯ

ಇರುಳ ಸಮಯ ಸುರಿಮಳೆಯೊಳಗೆ
ದೋಣಿಗಳಿಳಿದಿವೆ ಹೊಳೆಯೊಳಗೆ

ಶ್ಯಾಮಲ ಸಾಗರವೇ ಗುರಿಯೆನ್ನುತ
ಸಾಗಿವೆ ಸಾವಿರ ದೋಣಿಗಳು |
ಸೆರಗೇ ಹಾಯಿ ! ಹೃದಯವೆ ಹುಟ್ಟು !
ದೋಣಿ ಹಿಂದೆ ಜಲವೇಣಿಗಳು ||

ಏರಿಳಿಯುವ ಅಲೆ! ಮುಂದೆ ಇದಿರು ಹೊಳೆ !
ಜಗ್ಗುವುವೇ ಈ ಹಾಯಿಗಳು ?
ಎದೆಯನೆ ಸೀಳುವ ಹೋಳು ಬಂಡೆಗಳು
ಆ ಎನ್ನುವ ಸುಳಿಬಾಯಿಗಳು ||

ಮುಳುಗಿಸೊ ಅಥವಾ ತೇಲಿಸೊ ರಥವ
ಧೃತಿಯೊಂದೇ ಗತಿ ಹಾಡುತಿವೆ |
ಮುಳುಗುವ ಹೊರತೂ ತೇಲದು ದೋಣಿ
ಹಾಯಿ ವಿದಾಯವ ಹೇಳುತಿವೆ ||

-ಹೆಚ್. ಎಸ್. ವೆಂಕವೇಶಮೂರ್ತಿ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......