ಡಾ . ಗುರುರಾಜ ಕರ್ಜಗಿ ಯವರು ಶಿಕ್ಷನ ತಜ್ಞರು. ಇವರು ಮೂರೂ ದಶಕಗಲಿಗಿಂತಲೂ ಹೆಚ್ಚುಕಾಲ ಉನ್ನತ ಮಟ್ಟದ ವಿದ್ಯಾಸಂಸ್ಥೆ ಕಟ್ಟಿ , ಬೆಳೆಸಿ, ಪ್ರಾಧ್ಯಾಪಕರಾಗಿ , ಸಾವಿರಾರು ವಿದ್ಯಾರ್ಥಿಗಳ ಕನುಸುಗಳಿಗೆ ಬೆಳಕಾಗಿ, ಅವರ ಭವಿಷ್ಯವನ್ನು ಉಜ್ಜಲವಾಗಿಸಿದವರು. ವಿಶ್ವದಾದ್ಯಂತ ಶಿಷ್ಯ ಪರಂಪರೆಯನ್ನ್ನು ಹೊಂದಿರುವ ಇವರು ಕರ್ನಾಟಕ ವಿಶ್ವವಿದ್ಯಾನಿಲಯದಿಂದ ರಸಾಯನ ಶಾಸ್ತ್ರದಲ್ಲಿ ಡಾಕ್ಟರೇಟನ್ನು ಪಡೆದುಕೊಂಡಿದ್ದಾರೆ. ೨೨ಕ್ಕೂಹೆಚ್ಚು ಸಂಶೋಧನಾ ಲೇಖನಗಳನು ದೇಶ ವಿದೇಶಗಳ ನಿಯತಕಾಲಿಕೆಗಳಲ್ಲಿ ಪ್ರಕಟಿಸಿದ್ದಾರೆ .
ವಿ.ವಿ. ಎಸ್. ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ೧೬ ವರ್ಷಗಳ ಕಾಲ ಪ್ರಾಂಶುಪಾಲರಾಗಿ , ಜೈನ್ ಅಂತರರಾಷ್ಟ್ರೀಯ ವಸತಿ ಶಾಲೆಯಾ ಸ್ಥಾಪಕ ಪ್ರಾಂಶುಪಾಲರಾಗಿ ಹಾಗು ನಿರ್ದೇಶಕರಾಗಿ , ಅಂತರರಾಷ್ಟ್ರೀಯ ಸೃಜನಶೀಲ ಅಧ್ಯಾಪನ ಕೇಂದ್ರದ (iACT) ಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಇವರು ಈಗ ಸೃಜನಶೀಲ ಅಧ್ಯಾಪನ ಕೇಂದ್ರದ (ACT) ಅಧ್ಯಕ್ಷರಾಗಿದ್ದಾರೆ , ಇವರ ಅನುಭವದ ಮೂಸೆಯಿಂದ ಕತೆಗಳೂ , ಲೇಖನಗಳೂ, ಪಠ್ಯ ಪುಸ್ತಕಗಳು ಮುಡಿಬಂದಿವೆ . ಸೃಜನ ಶೀಲತೆ , ಸಂವಹನಕಲೆ , ಮುಂತಾದದುಗಳಲಿ ಆಸಕ್ತಿ ಹೊಂದಿರುವ ಡಾ ಕರಜಗಿಯವರು ತಮ್ಮ ಧನಾತ್ಮಕ ಚಿಂತನೆಗಳು , ಕಾರ್ಯಕ್ಷಮತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ಚಿರಪರಿಚಿತರು ಇವರ ಉಪನ್ಯಾಸ ಹಾಗು ಕಾರ್ಯಾಗಾರಗಳಿಗೆ , ಭಾರತ ಮತ್ತು ವಿದೇಶಗಳಿಲಿಯೂ ತುಂಬ ಬೇಡಿಕೆ ಇದೆ .
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment