Thursday, July 28, 2011

ಜನುಮದ ಜಾತ್ರಿ .............ದ.ರಾ.ಬೇಂದ್ರೆ

ನೇತ್ರಪಲ್ಲವಿಯಿಂದ ಸೂತ್ರಗೊಂಬೀ ಹಾಂಗ
ಪಾತ್ರ ಕುಣಿಸ್ಯಾನ ಒಲುಮೀಗೆ | ದಿನದಿನ
ಜಾತ್ರಿಯೆನಿಸಿತ್ತ ಜನುಮವು. ||೧||

ಹುಬ್ಬು ಹಾರಸಿದಾಗ ಹಬ್ಬ ಎನಿಸಿತು ನನಗ
‘ಅಬ್ಬ’ ಎನಬೇಡs ನನ ಗೆಣತಿ | ಸಾವಿರಕ
ಒಬ್ಬ ನೋಡವ್ವ ನನ ನಲ್ಲ. ||೨||


ಕಣ್ಣೆವಿ ಎತ್ತಿದರ ಹುಣ್ಣೀವಿ ತೆರಧ್ಹಾಂಗ
ಕಣ್ಣು ಏನಂತ ಬಣ್ಣಿಸಲೆ | ಚಿತ್ತಕ್ಕ
ಕಣ್ಣು ಬರೆಧ್ಹಾಂಗ ಕಂಡಿತ್ತು. ||೩||

ಹೇಸಿರಲು ಈ ಜೀವ ಆಸಿ ಹುಟ್ಟಿಸುತಿತ್ತು
ಮೀಸಿ ಮೇಲೆಳೆದ ಕಿರಿಬೆರಳು | ಕೆಂಗಯ್ಯ
ಬೀಸಿ ಕರೆದಾನ ನನಗಂತ. ||೪||

ತಂಬುಲತುಟಿ ನಗಿ ಹೊಂಬಿಸಲೆಂಬಂತೆ
ಬಿಂಬಿಸಿತವ್ವಾ ಎದಿಯಾಗ | ನಂಬೀಸಿ
ರಂಬೀಸಿತವ್ವಾ ಜೀವವ. ||೫||
-- ದ.ರಾ.ಬೇಂದ್ರೆ

ಕೃಪೆ: ಸುನಾಥ್
ಮೂಲ ಲೇಖನ: http://sallaap.blogspot.com/2011/07/blog-post.html

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......