Tuesday, August 9, 2011

ಕುಂಬಾರಕಿ ಈಕಿ ಕುಂಬಾರಕಿ

ಕುಂಬಾರಕಿ ಈಕಿ ಕುಂಬಾರಕಿ ಈ
ಬ್ರಂಹಾಂಡವೆಲ್ಲ ತುಂಬಿಕೊಂಡಿರುವ

ಚಿನ್ನ ಎಂಬುವ ಮಣ್ಣನು ತರಿಸಿ
ತನು ಎಂಬುವ ನೀರನು ಹಣಿಸಿ
ಮನ ಎಂಬುವ ಹುದಲನು ಕಲಸಿ
ಗುಣ ಎಂಬುವ ಸೂಸನು ಹಾಕಿ

ಭಕ್ತಿ ಎಂಬುವ ತಿಗರಿಯ ಮಾಡಿ
ಧ್ಯಾನ ಎಂಬುವ ಬಡಗಿಯ ಊರಿ
ಮುನ್ನೂರರವತ್ತ ಸುತ್ತನು ತಿರಗಿ
ಗಡಗಿ ತಯಾರು ಮಾಡೂವಾಕಿ

ಆಚಾರ ಎಂಬುವ ಆವಿಗೆ ಮುಚ್ಚಿ
ಅರಿವು ಎಂಬುವ ಬೆಂಕಿಯ ಹಚ್ಚಿ
ಸಾವಿರ ಕೊಡಗಳ ಸುಟ್ಟು ಇಂದು
ಸಂತಿಗಿ ಓಯ್ದು ಮಾರುವಾಕಿ

ಮೂರು ಕಾಸಿಗೊಂದು ಕುಡಕಿಯ ಮಾರಿ
ಆರು ಕಾಸಿಗೊಂದು ಗಡಗಿಯ ಮಾರಿ
ವಸುಧೆಯೊಳು ಶಿಶುನಾಳಧೀಶನ ಮುಂದೆ
ಧ್ಯಾನದ ಮುಗಿಯೊಂದು ಇಡುವಾಕಿ

-ಶಿಶುನಾಳ ಶರೀಫ್

(ಕಾರಂಜಿ ಸಿನಿಮಾದಲ್ಲಿ ಈ ಹಾಡು ತುಂಬ ಸೊಗಸಾಗಿ ಮೂಡಿಬಂದಿದೆ.)

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...