Tuesday, August 9, 2011

ಕುಂಬಾರಕಿ ಈಕಿ ಕುಂಬಾರಕಿ

ಕುಂಬಾರಕಿ ಈಕಿ ಕುಂಬಾರಕಿ ಈ
ಬ್ರಂಹಾಂಡವೆಲ್ಲ ತುಂಬಿಕೊಂಡಿರುವ

ಚಿನ್ನ ಎಂಬುವ ಮಣ್ಣನು ತರಿಸಿ
ತನು ಎಂಬುವ ನೀರನು ಹಣಿಸಿ
ಮನ ಎಂಬುವ ಹುದಲನು ಕಲಸಿ
ಗುಣ ಎಂಬುವ ಸೂಸನು ಹಾಕಿ

ಭಕ್ತಿ ಎಂಬುವ ತಿಗರಿಯ ಮಾಡಿ
ಧ್ಯಾನ ಎಂಬುವ ಬಡಗಿಯ ಊರಿ
ಮುನ್ನೂರರವತ್ತ ಸುತ್ತನು ತಿರಗಿ
ಗಡಗಿ ತಯಾರು ಮಾಡೂವಾಕಿ

ಆಚಾರ ಎಂಬುವ ಆವಿಗೆ ಮುಚ್ಚಿ
ಅರಿವು ಎಂಬುವ ಬೆಂಕಿಯ ಹಚ್ಚಿ
ಸಾವಿರ ಕೊಡಗಳ ಸುಟ್ಟು ಇಂದು
ಸಂತಿಗಿ ಓಯ್ದು ಮಾರುವಾಕಿ

ಮೂರು ಕಾಸಿಗೊಂದು ಕುಡಕಿಯ ಮಾರಿ
ಆರು ಕಾಸಿಗೊಂದು ಗಡಗಿಯ ಮಾರಿ
ವಸುಧೆಯೊಳು ಶಿಶುನಾಳಧೀಶನ ಮುಂದೆ
ಧ್ಯಾನದ ಮುಗಿಯೊಂದು ಇಡುವಾಕಿ

-ಶಿಶುನಾಳ ಶರೀಫ್

(ಕಾರಂಜಿ ಸಿನಿಮಾದಲ್ಲಿ ಈ ಹಾಡು ತುಂಬ ಸೊಗಸಾಗಿ ಮೂಡಿಬಂದಿದೆ.)

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......