Sunday, August 14, 2011

೬೪ ಯಾಕಾಯ್ತು? ೬೩ ಆಗಿತ್ತು ಅದಕ್ಕೆ?!


ನಮ್ಮ 'ಭಾರ'ತಕ್ಕೆ ೬೪ರ ಮರು ಹುಟ್ಟಿನ ಹುಸಿ ಸಂಭ್ರಮ! ನಾನೂ ಇದೇ ತಿಂಗಳಲ್ಲಿ ಕಣ್ಣು ಬಿಟ್ಟವನಾದ್ದರಿಂದ ನನಗೂ ಇದರ ಸಂಭ್ರಮದಲ್ಲಿ ಶರೀಕನಾಗುವ ಹಂಬಲ.ಆದರೆ ಸುಮ್ಮನೆ ಕೂತರೂ ಕೂದಲು-ಉಗುರು ಕಳೆಯಂತೆ ಬೆಳೆಯೋ ಹಾಗೆ ವಯಸ್ಸಂತೂ ಆಗೇ ಆಗುತ್ತದೆ ಎನ್ನುವಂತೆ ;ಕೇವಲ ಕಾಲಚಕ್ರದ ಅರೆ ಮತ್ತೊಮ್ಮೆ ತಿರುಗಿದ್ದಕ್ಕೆ ವರ್ಷ ಇನ್ನೊಂದಾಯ್ತು ಅಂತ ಸಂತೋಷಪಡಲೇ? ಇಲ್ಲ ನಮ್ಮೆಲ್ಲರ ತಾಯಿ ಭಾರತಿಯ ಎದೆಯನ್ನ ಮನಸೋ ಇಚ್ಛೆ ಬಗೆದು ಮಗುಮ್ಮಾಗಿ ತಮ್ಮ ತಿಜೋರಿ ತುಂಬಿ ಕೊಂಡ ಸ'ಗಣಿ' ತಿಂದವರನ್ನ ನೋಡಿ ಬೀಗಲೇ? ಇಲ್ಲ ,೨ಜಿ-೩ಜಿ ಎಂದು ಎಲ್ಲರನ್ನೂ ಜೀ ಎಂದೇ ಕರೆಯುತ್ತಾ ಅವಳೊಡಲಿಗೆ ಕಾನೂನು ಬದ್ಧವಾಗಿಯೇ ಕನ್ನ ಹಾಕುತ್ತಿರುವ ಖದೀಮರನ್ನ ಕಂಡು ಎದೆಯುಬ್ಬಿಸಲೆ? ಏನೊಂದೂ ಸ್ಪಷ್ಟವಾಗದೆ ಕೆಕರುಮೆಕರಾಗಿದ್ದೇನೆ! ಗೊಂದಲ ಜಾರಿಯಲ್ಲಿದೆ...

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......