Monday, March 19, 2012

ಜಾರುಬೆಣ್ಣೆಯಿದೆ ಕೈಯೊಳಗೆ

ಜಾರುಬೆಣ್ಣೆಯಿದೆ ಕೈಯೊಳಗೆ
ಅಂಬೆಗಾಲನಡೆ! ಧೂಳಡರಿದ ಮೈ!
ಮೊಸರಿನ ಕೊಸರಿದೆ ಮುಖದೊಳಗೆ!


ಕನ್ನಡಿ ಕೆನ್ನೆ! ನೇರಿಲೆ ಕಣ್ಣು !
ಹಣೆಯಲಿ ಗೋರೋಚನ ತಿಲಕ !
ನೊಸಲಿನ ತುಂಬ ಗುಂಗುರಿನುಂಗುರ
ಮುಖಕಮಲಕೆ ಕವಿದಿವೆ ಭೃಂಗ ||


ಕೊರಳಲಿ ತಾಯತಿ! ಹುಲಿಯುಗುರಿನ ಸರ !
ಬರುತಿದೆ ಶ್ಯಾಮಾಂಗನ ಡೋಲಿ |
ಗಾಳಿಗಾಡುತಿದೆ ಸಿರಿ ಮುಂಗುರುಳು
ಮಧು ಹೀರಿದ ದುಂಬಿಯ ಹೋಲಿ || 


-ಹೆಚ್. ಎಸ್ ವೆಂಕಟೇಶ ಮೂರ್ತಿ (ಉತ್ತರಾಯಣ ಮತ್ತು.... ಕವನ ಸಂಕಲನದಿಂದ)

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...