Monday, March 19, 2012

ಜಾರುಬೆಣ್ಣೆಯಿದೆ ಕೈಯೊಳಗೆ

ಜಾರುಬೆಣ್ಣೆಯಿದೆ ಕೈಯೊಳಗೆ
ಅಂಬೆಗಾಲನಡೆ! ಧೂಳಡರಿದ ಮೈ!
ಮೊಸರಿನ ಕೊಸರಿದೆ ಮುಖದೊಳಗೆ!


ಕನ್ನಡಿ ಕೆನ್ನೆ! ನೇರಿಲೆ ಕಣ್ಣು !
ಹಣೆಯಲಿ ಗೋರೋಚನ ತಿಲಕ !
ನೊಸಲಿನ ತುಂಬ ಗುಂಗುರಿನುಂಗುರ
ಮುಖಕಮಲಕೆ ಕವಿದಿವೆ ಭೃಂಗ ||


ಕೊರಳಲಿ ತಾಯತಿ! ಹುಲಿಯುಗುರಿನ ಸರ !
ಬರುತಿದೆ ಶ್ಯಾಮಾಂಗನ ಡೋಲಿ |
ಗಾಳಿಗಾಡುತಿದೆ ಸಿರಿ ಮುಂಗುರುಳು
ಮಧು ಹೀರಿದ ದುಂಬಿಯ ಹೋಲಿ || 


-ಹೆಚ್. ಎಸ್ ವೆಂಕಟೇಶ ಮೂರ್ತಿ (ಉತ್ತರಾಯಣ ಮತ್ತು.... ಕವನ ಸಂಕಲನದಿಂದ)

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......