Monday, March 19, 2012

ಜಾರುಬೆಣ್ಣೆಯಿದೆ ಕೈಯೊಳಗೆ

ಜಾರುಬೆಣ್ಣೆಯಿದೆ ಕೈಯೊಳಗೆ
ಅಂಬೆಗಾಲನಡೆ! ಧೂಳಡರಿದ ಮೈ!
ಮೊಸರಿನ ಕೊಸರಿದೆ ಮುಖದೊಳಗೆ!


ಕನ್ನಡಿ ಕೆನ್ನೆ! ನೇರಿಲೆ ಕಣ್ಣು !
ಹಣೆಯಲಿ ಗೋರೋಚನ ತಿಲಕ !
ನೊಸಲಿನ ತುಂಬ ಗುಂಗುರಿನುಂಗುರ
ಮುಖಕಮಲಕೆ ಕವಿದಿವೆ ಭೃಂಗ ||


ಕೊರಳಲಿ ತಾಯತಿ! ಹುಲಿಯುಗುರಿನ ಸರ !
ಬರುತಿದೆ ಶ್ಯಾಮಾಂಗನ ಡೋಲಿ |
ಗಾಳಿಗಾಡುತಿದೆ ಸಿರಿ ಮುಂಗುರುಳು
ಮಧು ಹೀರಿದ ದುಂಬಿಯ ಹೋಲಿ || 


-ಹೆಚ್. ಎಸ್ ವೆಂಕಟೇಶ ಮೂರ್ತಿ (ಉತ್ತರಾಯಣ ಮತ್ತು.... ಕವನ ಸಂಕಲನದಿಂದ)

No comments:

Post a Comment

ಕರಗಿತು ಕಂಪಿನ ಕರ್ಪೂರ... - ಮಹೇಶ ಭಟ್ಟ ಆರ್. ಹಾರ್ಯಾಡಿ

ಮೊನ್ನೆಯ ದಿನ (೧೦.೦೪.೨೬) ಬೆಳಗ್ಗೆ ನಾನು ಕಾಲೇಜಿಗೆ ಸೇರಿಕೊಂಡ ಸ್ವಲ್ಪ ಹೊತ್ತಿನಲ್ಲೇ ನನ್ನ ಶ್ರೀಮತಿ ಕರೆಮಾಡಿ 'ನಾಡೋಜ ಎಸ್. ಆರ್. ರಾಮಸ್ವಾಮಿ ಅವರು ಭೌತಿಕವಾಗಿ ...