Monday, March 19, 2012

ಜಾರುಬೆಣ್ಣೆಯಿದೆ ಕೈಯೊಳಗೆ

ಜಾರುಬೆಣ್ಣೆಯಿದೆ ಕೈಯೊಳಗೆ
ಅಂಬೆಗಾಲನಡೆ! ಧೂಳಡರಿದ ಮೈ!
ಮೊಸರಿನ ಕೊಸರಿದೆ ಮುಖದೊಳಗೆ!


ಕನ್ನಡಿ ಕೆನ್ನೆ! ನೇರಿಲೆ ಕಣ್ಣು !
ಹಣೆಯಲಿ ಗೋರೋಚನ ತಿಲಕ !
ನೊಸಲಿನ ತುಂಬ ಗುಂಗುರಿನುಂಗುರ
ಮುಖಕಮಲಕೆ ಕವಿದಿವೆ ಭೃಂಗ ||


ಕೊರಳಲಿ ತಾಯತಿ! ಹುಲಿಯುಗುರಿನ ಸರ !
ಬರುತಿದೆ ಶ್ಯಾಮಾಂಗನ ಡೋಲಿ |
ಗಾಳಿಗಾಡುತಿದೆ ಸಿರಿ ಮುಂಗುರುಳು
ಮಧು ಹೀರಿದ ದುಂಬಿಯ ಹೋಲಿ || 


-ಹೆಚ್. ಎಸ್ ವೆಂಕಟೇಶ ಮೂರ್ತಿ (ಉತ್ತರಾಯಣ ಮತ್ತು.... ಕವನ ಸಂಕಲನದಿಂದ)

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...