Monday, April 23, 2012



ಮನವೇ ಸರ್ಪ, ತನುವೇ ಹೇಳಿಗೆ!
ಹಾವಿನೊಡತಣ ಹುದುವಾಳಿಗೆ!
ಇನ್ನಾವಾಗ ಕೊಂದುಹುದೆಂದರಿಯೆ
ಇನ್ನಾವಾಗ ತಿಂದಹುದೆಂದರಿಯೆ.
ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ
ಅದೇ ಗಾರುಡ ಕೂಡಲಸಂಗಮದೇವ.

---------

ನೆಲವೊಂದೇ ಹೊಲಗೇರಿ ಶಿವಾಲಯಕ್ಕೆ
ಜಲವೊಂದೇ ಶೌಚಾ ಚಮನಕ್ಕೆ !
ಕುಲವೊಂದೇ ತನ್ನ ತಾನರಿದವಂಗೆ !
ಫಲವೊಂದೇ ಫಡದರ್ಶನ ಮುಕ್ತಿಗೆ
ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ


No comments:

Post a Comment

ಕರಗಿತು ಕಂಪಿನ ಕರ್ಪೂರ... - ಮಹೇಶ ಭಟ್ಟ ಆರ್. ಹಾರ್ಯಾಡಿ

ಮೊನ್ನೆಯ ದಿನ (೧೦.೦೪.೨೬) ಬೆಳಗ್ಗೆ ನಾನು ಕಾಲೇಜಿಗೆ ಸೇರಿಕೊಂಡ ಸ್ವಲ್ಪ ಹೊತ್ತಿನಲ್ಲೇ ನನ್ನ ಶ್ರೀಮತಿ ಕರೆಮಾಡಿ 'ನಾಡೋಜ ಎಸ್. ಆರ್. ರಾಮಸ್ವಾಮಿ ಅವರು ಭೌತಿಕವಾಗಿ ...