ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Sunday, March 17, 2013
ಬದುಕು ಮಾಯೆಯ ಮಾಟ - ದ ರಾ ಬೇಂದ್ರೆ
ಬದುಕು ಮಾಯೆಯ ಮಾಟ -
ಮಾತು ನೊರೆ-ತೆರೆಯಾಟ
ಜೀವ ಮೌನದ ತುಂಬ ಗುಂಭ ಮುನ್ನೀರು
ಕರುಣೋದಯದ ಕೂಡ
ಅರುಣೋದಯವು ಇರಲು
ಎದೆಯ ತುಂಬುತ್ತಲಿದೆ ಹೊಚ್ಚ ಹೊನ್ನೀರು!
ನಿಜದಲ್ಲೆ ಒಲವಿರಲಿ
ಚೆಲುವಿನಲೆ ನಲಿವಿರಲಿ
ಒಳಿತಿನಲೆ ಬಲವಿರಲಿ ಜೀವಕೆಳೆಯಾ!
ದೇವ ಜೀವನ ಕೇಂದ್ರ
ಒಬ್ಬೊಬ್ಬನು ಇಂದ್ರ
ಏನಿದ್ದರು ಎಲ್ಲ ಎಲ್ಲೆ ತಿಳಿಯಾ.
ಆತನಾಕೆಯೆ ನಮ್ಮ
ಜೀವನೌಕೆಯ ತಮ್ಮ
ಧ್ರುವ ಮರೆಯದಂತೆ ನಡೆಸುತ್ತಲಿರಲಿ
ಈ ನಾನು ಆ ನೀನು
ಒಂದೆ ತಾನಿನ ತಾನು
ತಾಳಲಯ ರಾಗಗಳು ಸಹಜ ಬರಲಿ
ಸಾಹಿತ್ಯ – ದ ರಾ ಬೇಂದ್ರೆ
ಸಂಗೀತ / ಗಾಯನ – ಸಿ ಅಶ್ವಥ್
Subscribe to:
Post Comments (Atom)
ನುಡಿಮುತ್ತು
ಕಲ್ಪನೆಗೆ ಹೂ ವಾದರೇನು.., ಮುಳ್ಳಾದರೇನು ? ಕಲ್ಪಿಸುವವರ ಹೃದಯ ಮೃದುವಾಗಿದ್ದರೆ ಮುಳ್ಳು ಕೂಡ ಮೃದುವಾಗಿ ಹೂವಾಗ ಬಲ್ಲದು
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
No comments:
Post a Comment