ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Wednesday, March 20, 2013
ಹಾವು ಅಂದ್ರೆ ಮರಿ ಗುಬ್ಬಿಗೆ ಭಾರಿ ದಿಗಿಲೇನೆ - ಡಾ.ಹೆಚ್. ಎಸ್. ವೆಂಕಟೇಶಮೂರ್ತಿ,
ಹಾವು ಅಂದ್ರೆ ಮರಿ ಗುಬ್ಬಿಗೆ ಭಾರಿ ದಿಗಿಲೇನೆ
ನೆನಿಸಿಕೊಂದ್ರೆ ಮೈ ನಡುಗುತ್ತೆ ಹಾಡೇ ಹಗಲೇನೆ
ಒಂದು ಸಾರಿ ಪುಟಾಣಿ ಗುಬ್ಬಿ ಅಮ್ಮನ ಕೇಳುತ್ತೆ
ಅಮ್ಮ ಅಮ್ಮ ಬುಸ್ಸ್ ಬುಸ್ಸ್ ಹಾವು ಹ್ಯಾಗಿರತ್ತೆ ||
ಒಕ್ಕಲಿ ಬೆನ್ನು ತಿಕ್ಕಿ ಕೊಳ್ತಾ ಅಮ್ಮ ಅನ್ನುತ್ತೆ
ಒಳ್ಳೆ ಪ್ರಶ್ನೆ ಹಾವು-ಹ್ಯಾಗಿರತ್ತೆ ಹಾವು ಹ್ಯಾಗಿರತ್ತೆ
ಹಾವಿರತ್ತೆ ಹಾವಿನ ಹಾಗೆ ಕಾಗೆ ಕಪ್ಪಗೆ
ಸಪೂರ ಥಳ ಥಳ ಕೆಂಡದ ಕಣ್ಣು ಕಡ್ಡಿ ದಪ್ಪಗೆ ||
ಸೂರಿಗೆ ಸುತ್ತಿ ಜೋತಾಡತ್ತೆ ಗೋಧಿ ಬೆನ್ನು
ದೀಪದ ಹಾಗೆ ಉರಿತಿರತ್ತೆ ಹಾವಿನ ಕಣ್ಣು
ಬುಸ್ಸ್ ಎನ್ನುತ್ತೆ ದರಿದ್ರ ಹಾವಿಗೆ ತುಂಬದ ಹೊಟ್ಟೆ
ಇಡಿ ಇಡಿಯಾಗಿ ನುಂಗ್ ಬಿಡುತ್ತೆ ಹಕ್ಕಿ ಮೊಟ್ಟೆ
ಹಕ್ಕಿಯ ಮೊಟ್ಟೆ ನುಂಗಿದ್ ಮೇಲೆ ಇಡಿ ಇಡೀಲಿ
ಹಕ್ಕಿ ಮರಿ ಬೆಳ್ಕೊಳುತ್ತೆ ಹಾವಿನ ಹೊಟ್ಟೆಲಿ
ಹಕ್ಕಿ ಮರಿ ಹುಟ್ಕೋಳ್ಳತ್ತೆ ಹಾವಿನ ಹೊಟ್ಟೆಲಿ
ಅಂತ ಪುಟಾಣಿ ಕುಣಿದಾಡ್ತಿತ್ತು ಅಮ್ಮನ ತೋಳಲ್ಲಿ
ನಿಟ್ಟುಸಿರಿತ್ತು ಅಮ್ಮ ಗುಬ್ಬಿ ಇಲ್ಲ ಬಂಗಾರ
ಇನ್ನೂ ನಿನಗೆ ತಿಳೀದಮ್ಮ ಹಾವಿನ ಹುನ್ನಾರ
ಹಾವಿನ ಹೊಟ್ಟೆ ಸೇರಿದ್ ಮೇಲೆ ಹೇಳೋದ್ ಇನ್ನೇನು
ಹಾವಿನ ಮೊಟ್ಟೆ ಆಗ್ಬಿಡತ್ತೆ ಹಕ್ಕಿ ಮೊಟ್ಟೇನು
Subscribe to:
Post Comments (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment