Saturday, April 13, 2013

ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ- ಕುವೆಂಪು


ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ
ಸೂರ್ಯೋದಯ ಚಂದ್ರೋದಯ ದೇವರ ದಯ ಕಾಣೋ
ಆನಂದಮಯ ಈ ಜಗಹೃದಯ

ಬಿಸಿಲಿದು ಬರಿ ಬಿಸಿಲಲ್ಲವೋ ಸೂರ್ಯನ ಕೃಪೆ ಕಾಣೋ
ಸೂರ್ಯನು ಬರಿ ರವಿಯಲ್ಲವೋ ಆ ಭ್ರಾಂತಿಯ ಮಾಣೋ
ಆನಂದಮಯ ಈ ಜಗಹೃದಯ.

ರವಿವದನವೇ ಶಿವಸದನವೊ ಬರಿ ಕಣ್ಣದು ಮಣ್ಣೋ
ಶಿವನಿಲ್ಲದೆ ಸೌಂದರ್ಯವೇ ಶವ ಮುಖದ ಕಣ್ಣೋ
ಆನಂದಮಯ ಈ ಜಗಹೃದಯ.

ಉದಯದೊಳೇನ್ ಹೃದಯವ ಕಾಣ್, ಅದೇ ಅಮೃತದ ಹಣ್ಣೋ
ಶಿವಕಾಣದೆ ಕವಿ ಕುರುಡನೋ ಶಿವ ಕಾವ್ಯದ ಕಣ್ಣೋ
ಆನಂದಮಯ ಈ ಜಗಹೃದಯ.

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...