Saturday, April 13, 2013

ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ- ಕುವೆಂಪು


ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ
ಸೂರ್ಯೋದಯ ಚಂದ್ರೋದಯ ದೇವರ ದಯ ಕಾಣೋ
ಆನಂದಮಯ ಈ ಜಗಹೃದಯ

ಬಿಸಿಲಿದು ಬರಿ ಬಿಸಿಲಲ್ಲವೋ ಸೂರ್ಯನ ಕೃಪೆ ಕಾಣೋ
ಸೂರ್ಯನು ಬರಿ ರವಿಯಲ್ಲವೋ ಆ ಭ್ರಾಂತಿಯ ಮಾಣೋ
ಆನಂದಮಯ ಈ ಜಗಹೃದಯ.

ರವಿವದನವೇ ಶಿವಸದನವೊ ಬರಿ ಕಣ್ಣದು ಮಣ್ಣೋ
ಶಿವನಿಲ್ಲದೆ ಸೌಂದರ್ಯವೇ ಶವ ಮುಖದ ಕಣ್ಣೋ
ಆನಂದಮಯ ಈ ಜಗಹೃದಯ.

ಉದಯದೊಳೇನ್ ಹೃದಯವ ಕಾಣ್, ಅದೇ ಅಮೃತದ ಹಣ್ಣೋ
ಶಿವಕಾಣದೆ ಕವಿ ಕುರುಡನೋ ಶಿವ ಕಾವ್ಯದ ಕಣ್ಣೋ
ಆನಂದಮಯ ಈ ಜಗಹೃದಯ.

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...