ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Saturday, April 13, 2013
ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ- ಕುವೆಂಪು
ಆನಂದಮಯ ಈ ಜಗಹೃದಯ ಏತಕೆ ಭಯ ಮಾಣೋ
ಸೂರ್ಯೋದಯ ಚಂದ್ರೋದಯ ದೇವರ ದಯ ಕಾಣೋ
ಆನಂದಮಯ ಈ ಜಗಹೃದಯ
ಬಿಸಿಲಿದು ಬರಿ ಬಿಸಿಲಲ್ಲವೋ ಸೂರ್ಯನ ಕೃಪೆ ಕಾಣೋ
ಸೂರ್ಯನು ಬರಿ ರವಿಯಲ್ಲವೋ ಆ ಭ್ರಾಂತಿಯ ಮಾಣೋ
ಆನಂದಮಯ ಈ ಜಗಹೃದಯ.
ರವಿವದನವೇ ಶಿವಸದನವೊ ಬರಿ ಕಣ್ಣದು ಮಣ್ಣೋ
ಶಿವನಿಲ್ಲದೆ ಸೌಂದರ್ಯವೇ ಶವ ಮುಖದ ಕಣ್ಣೋ
ಆನಂದಮಯ ಈ ಜಗಹೃದಯ.
ಉದಯದೊಳೇನ್ ಹೃದಯವ ಕಾಣ್, ಅದೇ ಅಮೃತದ ಹಣ್ಣೋ
ಶಿವಕಾಣದೆ ಕವಿ ಕುರುಡನೋ ಶಿವ ಕಾವ್ಯದ ಕಣ್ಣೋ
ಆನಂದಮಯ ಈ ಜಗಹೃದಯ.
Subscribe to:
Post Comments (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment