Sunday, March 17, 2013

ಬಾ ಸವಿತಾ ಬಾ ಸವಿತಾ ಬಾ ಸವಿತಾ - ಮಾಸ್ತಿ ವೆಂಕಟೇಶ ಅಯ್ಯಂಗಾರ್


ಬಾ ಸವಿತಾ ಬಾ ಸವಿತಾ ಬಾ ಸವಿತಾ..

ಒಳಗಿನ ಕಣ್ಣನು ಮುಚ್ಚಿಸಿವೊಮ್ಮೆ
ತಿಳಿವಿಗೆ ಬಣ್ಣವ ಹಚ್ಚಿಸಿವೊಮ್ಮೆ
ಒಳಿತಲ್ಲದುದೆ ಒಳಿತೆಂಬುದರ
ಚಳಕವೆಲ್ಲಕೆ ವಿನಾಶವತಾ || ಬಾ ||

ನೆಲೆಯಿಂದ ಹೊರಟು ಅಲೆ ಅಲೆ ಅಲೆ ಅಲೆ
ಛಲ ತೊಟ್ಟ ಮಲ್ಲ, ವಾಹಿನಿ ಬಾ
ನಿಲವಿಲ್ಲಾ ಜಗದಿ ಕತ್ತಲೆಗೆಂದು
ಗೆಲವನು ಸಾರುವ ಭಾಸವ ತಾ || ಬಾ ||

ಓಂ ತತ್ಸವಿತುರ್ವರೇಣ್ಯವೆಂಬೆವು
ಅಂತಲ್ಲದೆ ಬೇರೆಯದನು ನಂಬೆವು
ಪಂಥವ ಬೆಳೆಗಿಸಿ ನಿರೂಪಿಸಿ ಕೋಂಬೆವು
ಶಾಂತಸುಂದರ ಶಿವದಾ ಸವಿತಾ || ಬಾ ||

ಸಾಹಿತ್ಯ – ಮಾಸ್ತಿ ವೆಂಕಟೇಶ ಅಯ್ಯಂಗಾರ್
ಸಂಗೀತ – ಮೈಸೂರು ಅನಂತಸ್ವಾಮಿ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......