Wednesday, March 20, 2013

ಮುಚ್ಚು ಮರೆ ಇಲ್ಲದೆಯೇ - ಕುವೆಂಪು


ಮುಚ್ಚು ಮರೆ ಇಲ್ಲದೆಯೇ ನಿನ್ನಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ , ನರಕವಿದೆ ನಾಕವಿದೆ, ಸ್ವೀಕರಿಸು ಓ ಗುರುವೇ ಅಂತರಾತ್ಮ
|| ಮುಚ್ಚು ಮರೆ ಇಲ್ಲದೆಯೇ ||

ರವಿಗೆ ಕಾಂತಿಯನೀವ ನಿನ್ನ ಕಣ್ಣೀಕ್ಷಿಸಲು, ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಂಗೇ, ನರಕ ತಾನುಳಿಯುವುದೇ ನರಕವಾಗಿ
|| ಮುಚ್ಚು ಮರೆ ಇಲ್ಲದೆಯೇ ||

ಸಾಂತ ರೀತಿಯನೆಮ್ಮೀ ಕದಡಿರುವುದೆನ್ನಾತ್ಮ, ನಾಂತರೀತಿಯು ಅದೆಂತೋ ಓ ಅನಂತ
ನನ್ನ ನೀತಿಯ ಕುರುಡಿನಿಂದೆನ್ನ ರಕ್ಶಿಸಯ್, ನಿನ್ನ ಪ್ರೀತಿಯ ಬೆಳಕಿನ ಆನಂದಕೆ
|| ಮುಚ್ಚು ಮರೆ ಇಲ್ಲದೆಯೇ ||

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...