Wednesday, March 20, 2013

ಮುಚ್ಚು ಮರೆ ಇಲ್ಲದೆಯೇ - ಕುವೆಂಪು


ಮುಚ್ಚು ಮರೆ ಇಲ್ಲದೆಯೇ ನಿನ್ನಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ , ನರಕವಿದೆ ನಾಕವಿದೆ, ಸ್ವೀಕರಿಸು ಓ ಗುರುವೇ ಅಂತರಾತ್ಮ
|| ಮುಚ್ಚು ಮರೆ ಇಲ್ಲದೆಯೇ ||

ರವಿಗೆ ಕಾಂತಿಯನೀವ ನಿನ್ನ ಕಣ್ಣೀಕ್ಷಿಸಲು, ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಂಗೇ, ನರಕ ತಾನುಳಿಯುವುದೇ ನರಕವಾಗಿ
|| ಮುಚ್ಚು ಮರೆ ಇಲ್ಲದೆಯೇ ||

ಸಾಂತ ರೀತಿಯನೆಮ್ಮೀ ಕದಡಿರುವುದೆನ್ನಾತ್ಮ, ನಾಂತರೀತಿಯು ಅದೆಂತೋ ಓ ಅನಂತ
ನನ್ನ ನೀತಿಯ ಕುರುಡಿನಿಂದೆನ್ನ ರಕ್ಶಿಸಯ್, ನಿನ್ನ ಪ್ರೀತಿಯ ಬೆಳಕಿನ ಆನಂದಕೆ
|| ಮುಚ್ಚು ಮರೆ ಇಲ್ಲದೆಯೇ ||

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...