Wednesday, March 20, 2013

ಮುಚ್ಚು ಮರೆ ಇಲ್ಲದೆಯೇ - ಕುವೆಂಪು


ಮುಚ್ಚು ಮರೆ ಇಲ್ಲದೆಯೇ ನಿನ್ನಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ , ನರಕವಿದೆ ನಾಕವಿದೆ, ಸ್ವೀಕರಿಸು ಓ ಗುರುವೇ ಅಂತರಾತ್ಮ
|| ಮುಚ್ಚು ಮರೆ ಇಲ್ಲದೆಯೇ ||

ರವಿಗೆ ಕಾಂತಿಯನೀವ ನಿನ್ನ ಕಣ್ಣೀಕ್ಷಿಸಲು, ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಂಗೇ, ನರಕ ತಾನುಳಿಯುವುದೇ ನರಕವಾಗಿ
|| ಮುಚ್ಚು ಮರೆ ಇಲ್ಲದೆಯೇ ||

ಸಾಂತ ರೀತಿಯನೆಮ್ಮೀ ಕದಡಿರುವುದೆನ್ನಾತ್ಮ, ನಾಂತರೀತಿಯು ಅದೆಂತೋ ಓ ಅನಂತ
ನನ್ನ ನೀತಿಯ ಕುರುಡಿನಿಂದೆನ್ನ ರಕ್ಶಿಸಯ್, ನಿನ್ನ ಪ್ರೀತಿಯ ಬೆಳಕಿನ ಆನಂದಕೆ
|| ಮುಚ್ಚು ಮರೆ ಇಲ್ಲದೆಯೇ ||

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...