Sunday, March 17, 2013

ಎಂಥಾ ದಿನಗಳವು ಮರೆಯಾಗಿ ಹೋದವು - ಸುಬ್ರಾಯ ಚೊಕ್ಕಾಡಿ


ಎಂಥಾ ದಿನಗಳವು ಮರೆಯಾಗಿ ಹೋದವು
ಮಿಂಚಂಥ ಕ್ಷಣಗಳವು ಇನ್ನೆಂದೂ ಬಾರವು ||

ಸುರಿವ ಮಳೆಗೆ ದೋಣಿಯನ್ನು ತೇಲಿ ಬಿಟ್ಟೆವು,
ಚಿಟ್ಟೆ ಹೂವ ಗೊಂದಲದಲಿ ನಕ್ಕು ನಲಿದೆವು
ಮುಗಿಲ ಬಣ್ಣ ಚಂದ್ರ ತಾರೆ ಹಾಡ ಹಿಡಿದೆವು
ಮುಂದೆ ನುಗ್ಗಲೇನೋ ಬಡಿದು ಕೆಳಗೆ ಕುಸಿದೆವು || ಎಂಥಾ ||

ಹಕ್ಕಿ ಬೆನ್ನನೇರಿ ಗಗನ ಮೀರಿ ನೆಗೆದೆವು
ಇಂದ್ರ ಚಾಪದಲ್ಲಿ ಕೈ ಕೈ ಬೆಸೆದು ನಡೆದೆವು
ಈಗ ಹಕ್ಕಿ ರೆಕ್ಕೆ ಮುರಿದು ಧರೆಗೆ ಉರುಳಿದೆ
ಕಿಸೆಯಲಿಟ್ಟ ಬಿಲ್ಲ ತುಣುಕು ಕಳೆದು ಹೋಗಿದೆ || ಎಂಥಾ ||




ಸಾಹಿತ್ಯ – ಸುಬ್ರಾಯ ಚೊಕ್ಕಾಡಿ
ಸಂಗೀತ – ಸಿ ಅಶ್ವಥ್
ಗಾಯನ – ಸಂಗೀತ ಕಟ್ಟಿ ಕುಲಕರ್ಣಿ / ಅಜಯ್ ವಾರಿಯರ್

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......