ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Sunday, March 17, 2013
ಎಂಥಾ ದಿನಗಳವು ಮರೆಯಾಗಿ ಹೋದವು - ಸುಬ್ರಾಯ ಚೊಕ್ಕಾಡಿ
ಎಂಥಾ ದಿನಗಳವು ಮರೆಯಾಗಿ ಹೋದವು
ಮಿಂಚಂಥ ಕ್ಷಣಗಳವು ಇನ್ನೆಂದೂ ಬಾರವು ||
ಸುರಿವ ಮಳೆಗೆ ದೋಣಿಯನ್ನು ತೇಲಿ ಬಿಟ್ಟೆವು,
ಚಿಟ್ಟೆ ಹೂವ ಗೊಂದಲದಲಿ ನಕ್ಕು ನಲಿದೆವು
ಮುಗಿಲ ಬಣ್ಣ ಚಂದ್ರ ತಾರೆ ಹಾಡ ಹಿಡಿದೆವು
ಮುಂದೆ ನುಗ್ಗಲೇನೋ ಬಡಿದು ಕೆಳಗೆ ಕುಸಿದೆವು || ಎಂಥಾ ||
ಹಕ್ಕಿ ಬೆನ್ನನೇರಿ ಗಗನ ಮೀರಿ ನೆಗೆದೆವು
ಇಂದ್ರ ಚಾಪದಲ್ಲಿ ಕೈ ಕೈ ಬೆಸೆದು ನಡೆದೆವು
ಈಗ ಹಕ್ಕಿ ರೆಕ್ಕೆ ಮುರಿದು ಧರೆಗೆ ಉರುಳಿದೆ
ಕಿಸೆಯಲಿಟ್ಟ ಬಿಲ್ಲ ತುಣುಕು ಕಳೆದು ಹೋಗಿದೆ || ಎಂಥಾ ||
ಸಾಹಿತ್ಯ – ಸುಬ್ರಾಯ ಚೊಕ್ಕಾಡಿ
ಸಂಗೀತ – ಸಿ ಅಶ್ವಥ್
ಗಾಯನ – ಸಂಗೀತ ಕಟ್ಟಿ ಕುಲಕರ್ಣಿ / ಅಜಯ್ ವಾರಿಯರ್
Subscribe to:
Post Comments (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment