ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Wednesday, March 20, 2013
ನೀನಿಲ್ಲದೇ ನನಗೇನಿದೇ - ಎಂ ಎನ್ ವ್ಯಾಸರಾವ್
ನೀನಿಲ್ಲದೇ ನನಗೇನಿದೇ
ಮನಸ್ಸೆಲ್ಲಾ ನಿನ್ನಲ್ಲಿ ನೆಲೆಯಾಗಿದೆ
ಕನಸ್ಸೆಲ್ಲಾ ಕಣ್ಣಲ್ಲೇ ಸೆರೆಯಾಗಿದೇ
ನಿನಗಾಗಿ ಕಾದು ಕಾದು ಪರಿತಪಿಸಿ ನೊಂದೇ ನಾನು
ಕಹಿಯಾದ ವಿರಹದ ನೋವೂ ಹಗಲಿರುಳು ತಂದೇ ನೀನು
ಎದೆಯಾಸೆ ಏನೋ ಎಂದೂ ನೀ ಕಾಣದಾದೇ
ನಿಶೆಯೊಂದೆ ನನ್ನಲ್ಲೀ ನೀ ತುಂಬಿದೇ
ಬೆಳಕೊಂದೆ ನಿನ್ನಿಂದಾ ನಾ ಬಯಸಿದೇ
ನೀನಿಲ್ಲದೇ ನನಗೇನಿದೇ…
ಒಲವೆಂಬ ಕಿರಣಾ ಬೀರೀ ಒಳಗಿರುವ ಕಣ್ಣಾ ತೆರೆಸೀ
ಒಣಗಿರುವ ಎದೆನೆಲದಲ್ಲಿ ಭರವಸೆಯ ಜೀವ ಹರಿಸಿ
ಸೆರೆಯಿಂದ ಬಿಡಿಸಿ ನನ್ನ ಆತಂಕ ನೀಗು
ಹೊಸ ಜೀವ ನಿನ್ನಿಂದಾ ನಾ ತಾಳುವೇ
ಹೊಸ ಲೋಕ ನಿನ್ನಿಂದಾ ನಾ ಕಾಣುವೇ
ನೀನಿಲ್ಲದೇ ನನಗೇನಿದೇ …
Subscribe to:
Post Comments (Atom)
ನುಡಿಮುತ್ತು
ಕಲ್ಪನೆಗೆ ಹೂ ವಾದರೇನು.., ಮುಳ್ಳಾದರೇನು ? ಕಲ್ಪಿಸುವವರ ಹೃದಯ ಮೃದುವಾಗಿದ್ದರೆ ಮುಳ್ಳು ಕೂಡ ಮೃದುವಾಗಿ ಹೂವಾಗ ಬಲ್ಲದು
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
No comments:
Post a Comment