Monday, September 9, 2013

ಮಹಾಕವಿ ಮಲಗಿದ್ದಾನೆ - ಬೇಲೂರು ರಘುನಂದನ


ಮಹಾಕವಿ ಮಲಗಿದ್ದಾನೆ
ಮುಂಜಾವಿನ ಹಸುರರವಿ
ಹೆಸರಿರದ ಉಸಿರನು
ಜಗಕೆ ಹಂಚಲು
ಇವನ ಬಳಿ ಕಳಿಸಿದ್ದಾನೆ

ಶ್ರೀ ಬೇಲೂರು ರಘುನಂದನ್
ಕಾಡಿನ ಉನ್ಮಾದಕೆ
ಭುವಿ ಗಗನದ ಮಿಲನಕ್ಕೆ
ಹೂಮಳೆಯ ಸ್ಕಲನ
ಜೀವ ಹುಟ್ಟುವ ನೆಲದಿ
ಗಟ್ಟಿಯಾಗಿ ಬದುಕ
ಗುಟ್ಟು ಹೇಳಲು
ಮಹಾ ಕವಿ ಮಲಗಿದ್ದಾನೆ

ಮಣ್ಣು ಕಣ್ಣಾಗಿ ಕಣ್ಣು ಹಣ್ಣಾಗಿ
ನೀರ ಹೀರಿ ನೆರನ್ನೇ ಕೊಡುವ
ಹಸುರ ಎಲೆಯಾಗಿ
ಕಲೆಯ ಹೊಳೆಯಾಗಿ
ಕಾರುಣ್ಯದ ಕತೆಯ ಹೇಳುವ
ಗುರುವಾಗಿ ಮಹಾಕವಿ ಮಲಗಿದ್ದಾನೆ

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...