Monday, September 9, 2013

ಮಹಾಕವಿ ಮಲಗಿದ್ದಾನೆ - ಬೇಲೂರು ರಘುನಂದನ


ಮಹಾಕವಿ ಮಲಗಿದ್ದಾನೆ
ಮುಂಜಾವಿನ ಹಸುರರವಿ
ಹೆಸರಿರದ ಉಸಿರನು
ಜಗಕೆ ಹಂಚಲು
ಇವನ ಬಳಿ ಕಳಿಸಿದ್ದಾನೆ

ಶ್ರೀ ಬೇಲೂರು ರಘುನಂದನ್
ಕಾಡಿನ ಉನ್ಮಾದಕೆ
ಭುವಿ ಗಗನದ ಮಿಲನಕ್ಕೆ
ಹೂಮಳೆಯ ಸ್ಕಲನ
ಜೀವ ಹುಟ್ಟುವ ನೆಲದಿ
ಗಟ್ಟಿಯಾಗಿ ಬದುಕ
ಗುಟ್ಟು ಹೇಳಲು
ಮಹಾ ಕವಿ ಮಲಗಿದ್ದಾನೆ

ಮಣ್ಣು ಕಣ್ಣಾಗಿ ಕಣ್ಣು ಹಣ್ಣಾಗಿ
ನೀರ ಹೀರಿ ನೆರನ್ನೇ ಕೊಡುವ
ಹಸುರ ಎಲೆಯಾಗಿ
ಕಲೆಯ ಹೊಳೆಯಾಗಿ
ಕಾರುಣ್ಯದ ಕತೆಯ ಹೇಳುವ
ಗುರುವಾಗಿ ಮಹಾಕವಿ ಮಲಗಿದ್ದಾನೆ

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...