ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Monday, September 9, 2013

ಮಹಾಕವಿ ಮಲಗಿದ್ದಾನೆ - ಬೇಲೂರು ರಘುನಂದನ


ಮಹಾಕವಿ ಮಲಗಿದ್ದಾನೆ
ಮುಂಜಾವಿನ ಹಸುರರವಿ
ಹೆಸರಿರದ ಉಸಿರನು
ಜಗಕೆ ಹಂಚಲು
ಇವನ ಬಳಿ ಕಳಿಸಿದ್ದಾನೆ

ಶ್ರೀ ಬೇಲೂರು ರಘುನಂದನ್
ಕಾಡಿನ ಉನ್ಮಾದಕೆ
ಭುವಿ ಗಗನದ ಮಿಲನಕ್ಕೆ
ಹೂಮಳೆಯ ಸ್ಕಲನ
ಜೀವ ಹುಟ್ಟುವ ನೆಲದಿ
ಗಟ್ಟಿಯಾಗಿ ಬದುಕ
ಗುಟ್ಟು ಹೇಳಲು
ಮಹಾ ಕವಿ ಮಲಗಿದ್ದಾನೆ

ಮಣ್ಣು ಕಣ್ಣಾಗಿ ಕಣ್ಣು ಹಣ್ಣಾಗಿ
ನೀರ ಹೀರಿ ನೆರನ್ನೇ ಕೊಡುವ
ಹಸುರ ಎಲೆಯಾಗಿ
ಕಲೆಯ ಹೊಳೆಯಾಗಿ
ಕಾರುಣ್ಯದ ಕತೆಯ ಹೇಳುವ
ಗುರುವಾಗಿ ಮಹಾಕವಿ ಮಲಗಿದ್ದಾನೆ

No comments:

Post a Comment