Sunday, September 8, 2013

ಶಿಶಿರದ ಮೊದಲಲ್ಲಿ ಬೀಳುವ - ರಾಜೇಂದ್ರ ಪ್ರಸಾದ್

ಶಿಶಿರದ ಮೊದಲಲ್ಲಿ ಬೀಳುವ
ರಾತ್ರಿಮಳೆ ಹೊತ್ತಲ್ಲಿ
ಇವಳು ಪ್ರಳಯ ಸ್ವರೂಪಿ..
ನಾನೋ ಬಯಲು ಸೀಮೆಯ
ಬಿಸಿಲು ಕುದುರೆ!

ಖುರಪುಟದ ನಾದ
ನದಿ ಹರಿಯೋ
ಶಬ್ದ ಸಂಕರಕ್ಕೆ
ಭೂವ್ಯೋಮಗಳು ಒಂದಾದ
ಸಿಡಿಲ ಸಂಭ್ರಮ

ಧೋ..ಧೋ.. ಸುರಿವ ಮಳೆ
Sri Rajendra Prasad (RP)
ಭೋರ್ಗೆರೆವ ಗಂಡುಹೊಳೆ
ಹಾಗೆ ಸಣ್ಣಗೆ ಮೀಟಿದಂತೆ
ವೀಣೆ ತಂತಿ ತಾನ.

ದಾರಿಯುದ್ದ ಮುತ್ತಿನಧರ
ಕಚ್ಚಿದ ಮಧ್ಯಪಾನ
ಗಮ್ಯವೋ ಮುಳುಗೆದ್ದ
ಸಮಸ್ತ ತೀರ್ಥಸ್ನಾನ

ಮುಗಿಯುತ್ತಲೇ ಇಲ್ಲ
ದಂಡಯಾತ್ರೆ..
ಹರಿವ ನದಿಗೆ ಮೈಯೆಲ್ಲಾ ಕಾಲು
ಸುರಿವ ಮಳೆಗೆ ಮೈಯೆಲ್ಲಾ ಜೀವ

ಹಗಲು ಹಕ್ಕಿ ಹಾಡುವ ಹೊತ್ತಿಗೆ
ಅವಳು ಕೊಚ್ಚಿಹೋದ ಭತ್ತದ ಗದ್ದೆ
ನಾನು ನೆರೆ ನಿಂತ ಹೆಬ್ಬಳ್ಳ.. - ಆರ್.ಪಿ.

ಭೂಮಿಗೀತ ಬ್ಲಾಗಿಂದ,




No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...