Sunday, September 8, 2013

ಶಿಶಿರದ ಮೊದಲಲ್ಲಿ ಬೀಳುವ - ರಾಜೇಂದ್ರ ಪ್ರಸಾದ್

ಶಿಶಿರದ ಮೊದಲಲ್ಲಿ ಬೀಳುವ
ರಾತ್ರಿಮಳೆ ಹೊತ್ತಲ್ಲಿ
ಇವಳು ಪ್ರಳಯ ಸ್ವರೂಪಿ..
ನಾನೋ ಬಯಲು ಸೀಮೆಯ
ಬಿಸಿಲು ಕುದುರೆ!

ಖುರಪುಟದ ನಾದ
ನದಿ ಹರಿಯೋ
ಶಬ್ದ ಸಂಕರಕ್ಕೆ
ಭೂವ್ಯೋಮಗಳು ಒಂದಾದ
ಸಿಡಿಲ ಸಂಭ್ರಮ

ಧೋ..ಧೋ.. ಸುರಿವ ಮಳೆ
Sri Rajendra Prasad (RP)
ಭೋರ್ಗೆರೆವ ಗಂಡುಹೊಳೆ
ಹಾಗೆ ಸಣ್ಣಗೆ ಮೀಟಿದಂತೆ
ವೀಣೆ ತಂತಿ ತಾನ.

ದಾರಿಯುದ್ದ ಮುತ್ತಿನಧರ
ಕಚ್ಚಿದ ಮಧ್ಯಪಾನ
ಗಮ್ಯವೋ ಮುಳುಗೆದ್ದ
ಸಮಸ್ತ ತೀರ್ಥಸ್ನಾನ

ಮುಗಿಯುತ್ತಲೇ ಇಲ್ಲ
ದಂಡಯಾತ್ರೆ..
ಹರಿವ ನದಿಗೆ ಮೈಯೆಲ್ಲಾ ಕಾಲು
ಸುರಿವ ಮಳೆಗೆ ಮೈಯೆಲ್ಲಾ ಜೀವ

ಹಗಲು ಹಕ್ಕಿ ಹಾಡುವ ಹೊತ್ತಿಗೆ
ಅವಳು ಕೊಚ್ಚಿಹೋದ ಭತ್ತದ ಗದ್ದೆ
ನಾನು ನೆರೆ ನಿಂತ ಹೆಬ್ಬಳ್ಳ.. - ಆರ್.ಪಿ.

ಭೂಮಿಗೀತ ಬ್ಲಾಗಿಂದ,




No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......