Sunday, October 27, 2013

ಕಾದಿರುವಳು ಶಬರಿ ರಾಮ ಬರುವನೆಂದು


ಕಾದಿರುವಳು ಶಬರಿ ರಾಮ ಬರುವನೆಂದು ತನ್ನ ಪೂಜೆಗೊಳುವನೆಂದು
ವನವನವ ಸುತ್ತಿ ಸುಳಿದು ತರುತರುವನಲೆದು ತಿರಿದು | ಬಿರಿವೂಗಳಾಯ್ದು ತಂದು ತನಿವಣ್ಗಳಾಯ್ದು ತಂದು
ಕೊಳದಲ್ಲಿ ಮುಳುಗಿ ಮಿಂದು ಬಿಳಿ ನಾರು ಮುಡಿಯನುಟ್ಟು | ತಲೆವಾಗಿಲಿಂಗೆ ಬಂದು ಹೊಸತಿಲಲಿ ಕಾದು ನಿಂದು
ಎಳಗಾಳಿ ತೀಡುತಿರಲು ಕಿವಿಯೆತ್ತಿ ಆಲಿಸುವಳು | ಎಲೆಯಲುಗೆ ಗಾಳಿಯಲ್ಲಿ ನಡೆ ಸಪ್ಪುಳೆಂದು ಬಗೆದು
ದೂರಕ್ಕೆ ನೋಳ್ಪೆನೆಂದು ಮರವೇರಿ ದಿಟ್ಟಿಸುವಳು | ಗಿರಿ ಮೇಲಕೈದಿ ಕೈಯ ಮರೆ ಮಾಡಿ ನೋಡುತಿಹಳು
ಬಾ ರಾಮ, ರಾಮ ಎಂದು ಬರುತಿಹನು ಇಹನು ಎಂದು | ಹಗಲಿರುಳು ತವಕಿಸಿಹಳು ಕಳೆದಿಹವು ವರುಷ ಹಲವು
ಶಬರಿವೊಲು ಜನವು ದಿನವೂ ಯುಗಯುಗವು ಕರೆಯುತಿಹುದು| ಕರೆ ಇಳೆಗಳೇಳಲರಸಿ ತವಕದಲಿ ತಪಿಸುತಿಹುದು
ಭರವಸೆಗಳಳಿಯವಾಗಿ ಮನವೆಲ್ಲ ಬಯಕೆಯಾಗಿ | ಹಗಲೆಲ್ಲ ಕಾದು ಕೂಗಿ ಇರುಳೆಲ್ಲ ಜಾಗರಾಗಿ
ಬಂದಾನೊ ಬಾರನೋ ಓ ಕಂಡಾನೊ ಕಾಣನೋ ಓ | ಎಂದೆಂದು ಜಪಿಸಿ ತಪಿಸಿ ಶಂಕಾತುರಂಗಳೂರಿ
ಬಾ ರಾಮ, ಬಾರ, ಬಾರಾ ಬಡವರನು ಕಾಯು ಬಾರಾ| ಕಂಗಾಣದಿವರ ಪ್ರೇಮ ನುಡಿಸೋತ ಮೂಕ ಪ್ರೇಮ
ಕಾದಿರುವುದು ಜನವು ರಾಮ ಬರುವನೆಂದು ತಮ್ಮ ಪೂಜೆಗೊಳುವನೆಂದು


No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......