Monday, October 7, 2013

ಮೊದಲ ಮುಂಗಾರ - ರಾಜೇಂದ್ರ ಪ್ರಸಾದ್,



ಮೊದಲ ಮುಂಗಾರ
ಮಳೆಗೆ ಮೈಯೊಡ್ಡಿ
ನಿಂತ ಭೂತಾಯ
ದೇಹ ಘಮ್ ಎಂದಾಗ
ನನ್ನ ಮಾತು ಮಥಿಸಿ,
ಕಾವ್ಯ ಕಾರಣವಾಗುತ್ತದೆ.

ರಗರಗನೆ ಉರಿವ
ಸೂರ್ಯನ ಬೆಳಕು
ಚಂದ್ರನಿಗೆ ನೆರಳಾಗಿ
ಬೆಳದಿಂಗಳಾದಾಗ
ನನ್ನ ಭಾವ ಬಸಿದು
ಜೀವ ಚಿಲುಮೆಯಾಗುತ್ತದೆ.
ರಾಜೇಂದ್ರ ಪ್ರಸಾದ್

ಕೆಂಡದ ಬಣ್ಣದ
ಮಲ್ಲಿಗ ಮೈ..ಮುಖದ
ಅವಳ ಒಲವಿನ ನಗು
ಶಬ್ದತೀರದಲೆ ಚುಂಬಿಸಿದಾಗ
ಹೃದಯ ಹೂಬನವಾಗುತ್ತದೆ.

ಭೂಮಿಗೀತ ಬ್ಲಾಗಿಂದ, 

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...