ಮೊದಲ ಮುಂಗಾರ
ಮಳೆಗೆ ಮೈಯೊಡ್ಡಿ
ನಿಂತ ಭೂತಾಯ
ದೇಹ ಘಮ್ ಎಂದಾಗ
ನನ್ನ ಮಾತು ಮಥಿಸಿ,
ಕಾವ್ಯ ಕಾರಣವಾಗುತ್ತದೆ.
ರಗರಗನೆ ಉರಿವ
ಸೂರ್ಯನ ಬೆಳಕು
ಚಂದ್ರನಿಗೆ ನೆರಳಾಗಿ
ಬೆಳದಿಂಗಳಾದಾಗ
ನನ್ನ ಭಾವ ಬಸಿದು
ಜೀವ ಚಿಲುಮೆಯಾಗುತ್ತದೆ.
ರಾಜೇಂದ್ರ ಪ್ರಸಾದ್ |
ಕೆಂಡದ ಬಣ್ಣದ
ಮಲ್ಲಿಗ ಮೈ..ಮುಖದ
ಅವಳ ಒಲವಿನ ನಗು
ಶಬ್ದತೀರದಲೆ ಚುಂಬಿಸಿದಾಗ
ಹೃದಯ ಹೂಬನವಾಗುತ್ತದೆ.
ಭೂಮಿಗೀತ ಬ್ಲಾಗಿಂದ,
No comments:
Post a Comment