Monday, October 7, 2013

ಮೊದಲ ಮುಂಗಾರ - ರಾಜೇಂದ್ರ ಪ್ರಸಾದ್,



ಮೊದಲ ಮುಂಗಾರ
ಮಳೆಗೆ ಮೈಯೊಡ್ಡಿ
ನಿಂತ ಭೂತಾಯ
ದೇಹ ಘಮ್ ಎಂದಾಗ
ನನ್ನ ಮಾತು ಮಥಿಸಿ,
ಕಾವ್ಯ ಕಾರಣವಾಗುತ್ತದೆ.

ರಗರಗನೆ ಉರಿವ
ಸೂರ್ಯನ ಬೆಳಕು
ಚಂದ್ರನಿಗೆ ನೆರಳಾಗಿ
ಬೆಳದಿಂಗಳಾದಾಗ
ನನ್ನ ಭಾವ ಬಸಿದು
ಜೀವ ಚಿಲುಮೆಯಾಗುತ್ತದೆ.
ರಾಜೇಂದ್ರ ಪ್ರಸಾದ್

ಕೆಂಡದ ಬಣ್ಣದ
ಮಲ್ಲಿಗ ಮೈ..ಮುಖದ
ಅವಳ ಒಲವಿನ ನಗು
ಶಬ್ದತೀರದಲೆ ಚುಂಬಿಸಿದಾಗ
ಹೃದಯ ಹೂಬನವಾಗುತ್ತದೆ.

ಭೂಮಿಗೀತ ಬ್ಲಾಗಿಂದ, 

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...