Thursday, November 21, 2013

ಸತ್ಯವಂತರ ಸಂಗವಿರಲು ತೀರ್ಥವೇತಕೆ

ಸತ್ಯವಂತರ ಸಂಗವಿರಲು ತೀರ್ಥವೇತಕೆ
ನಿತ್ಯ ಜ್ಞಾನಿಯಾದ ಮೇಲೆ ಚಿಂತೆ ಯಾತಕೆ||ಪ||

ತಾನು ಉಣ್ಣದ ಪರರಿಗಿಕ್ಕದ ಧನವಿದ್ದೇತಕೆ
ಮಾನ ಹೀನನಾಗಿ ಬಾಳ್ವ ಮನುಜನೇತಕೆ
ಜ್ಞಾನವಿಲ್ಲದೇ ನೂರು ಕಾಲ ಬದುಕಲೇತಕೆ
ಮಾನಿನಿಯ ತೊರೆದವಗೆ ಭೋಗವೇತಕೆ||೧||

ಮಾತು ಕೇಳದೆ ಮಲತು ನಡೆವ ಮಕ್ಕಳೇತಕೆ
ಪ್ರೀತಿ ಇಲ್ಲದೆ ಎಡೆಯನಿಕ್ಕಿದ ಅನ್ನವೇತಕೆ
ನೀತಿಯರಿತು ನಡೆಯದಿರುವ ಬಂಟನೇತಕೆ
ಸೋತು ಹೆಣ್ಣಿಗೆ ಹೆದರಿ ನಡೆವ ಪುರುಷನೇತಕೆ||೨||

ಸಂಜ್ಞೆಯರಿತು ನಡೆಯದಿರುವ ಸತಿ ಇದ್ದೇತಕೆ
ಮುನ್ನ ಕೊಟ್ಟು ಪಡೆಯದನ್ನು ಬಯಸಲೇತಕೆ
ಮನ್ನಣೆಯ ನಡೆಸದಿರುವ ದೊರೆಯು ಏತಕೆ
ಚೆನ್ನ ಆದಿ ಕೇಶವನಲ್ಲದ ದೈವವೇತಕೆ ||೩||


Krupe : http://bhakthigeetha.blogspot.in/


No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...