Thursday, November 21, 2013

ಲಾಲಿ ಪಾವನ ಚರಣ ಲಾಲಿ ಅಘ ಹರಣ

ಲಾಲಿ ಪಾವನ ಚರಣ ಲಾಲಿ ಅಘ ಹರಣ
ಲಾಲಿ ವೆಂಕಟರಮಣ ಲಲಿತ ಕಲ್ಯಾಣ [ಪ]

ವನಜಾಕ್ಷ ಮಾಧವ ವಸುದೇವ ತನಯ
ಸನಕಾದಿ ಮುನಿವಂದ್ಯ ಸಾಧು ಜನಪ್ರಿಯ
ಇನ ಕೋಟಿ ಶತ ತೇಜ ಮುನಿ ಕಲ್ಪ ಭೂಜ
ಕನಕಾದ್ರಿ ನಿಲಯ ವೆಂಕಟರಾಯ[೧]

ಜಗದೇಕ ನಾಯಕ ಜಲಜದಳ ನೇತ್ರ
ಖಗರಾಜ ವಾಹನ ಕಲ್ಯಾಣ ಚರಿತ
ಸಗರ ತನಯಾರ್ಚಿತ ಸನಕಾದಿ ವಿನುತ
ರಘುವಂಶ ಕುಲ ತಿಲಕ ರಮಣೀಯ ಗಾತ್ರ[೨]

ನಂದಗೋಪ ಕುಮಾರ ನವನೀತ ಚೋರ
ಮಂದಾಕಿನಿ ಜನಕ ಮೋಹನಾಕಾರ
ಇಂದುಧರ ಸತಿ ವಿನುತ ವಿಶ್ವ ಸಂಚಾರ
ನಂದ ಗೋವಿಂದ ಮುಚುಕುಂದ ನುತ ಸಾರ[೩]

ನರ ಮೃಗಾಕಾರಿ ಹಿರಣ್ಯಕ ವೈರಿ
ಕರಿರಾಜ ರಕ್ಷಕ ಕಾರುಣ್ಯ ಮೂರ್ತಿ
ಹರಿ ಆದಿಕೇಶವ ಗುರು ಅಪ್ರಮೇಯ
ಶ್ರೀಧರ ಶೇಷಗಿರಿ ವರ ತಿಮ್ಮರಾಯ [೪]


Krupe : http://bhakthigeetha.blogspot.in/

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......