Thursday, November 21, 2013

ಲಾಲಿ ಪಾವನ ಚರಣ ಲಾಲಿ ಅಘ ಹರಣ

ಲಾಲಿ ಪಾವನ ಚರಣ ಲಾಲಿ ಅಘ ಹರಣ
ಲಾಲಿ ವೆಂಕಟರಮಣ ಲಲಿತ ಕಲ್ಯಾಣ [ಪ]

ವನಜಾಕ್ಷ ಮಾಧವ ವಸುದೇವ ತನಯ
ಸನಕಾದಿ ಮುನಿವಂದ್ಯ ಸಾಧು ಜನಪ್ರಿಯ
ಇನ ಕೋಟಿ ಶತ ತೇಜ ಮುನಿ ಕಲ್ಪ ಭೂಜ
ಕನಕಾದ್ರಿ ನಿಲಯ ವೆಂಕಟರಾಯ[೧]

ಜಗದೇಕ ನಾಯಕ ಜಲಜದಳ ನೇತ್ರ
ಖಗರಾಜ ವಾಹನ ಕಲ್ಯಾಣ ಚರಿತ
ಸಗರ ತನಯಾರ್ಚಿತ ಸನಕಾದಿ ವಿನುತ
ರಘುವಂಶ ಕುಲ ತಿಲಕ ರಮಣೀಯ ಗಾತ್ರ[೨]

ನಂದಗೋಪ ಕುಮಾರ ನವನೀತ ಚೋರ
ಮಂದಾಕಿನಿ ಜನಕ ಮೋಹನಾಕಾರ
ಇಂದುಧರ ಸತಿ ವಿನುತ ವಿಶ್ವ ಸಂಚಾರ
ನಂದ ಗೋವಿಂದ ಮುಚುಕುಂದ ನುತ ಸಾರ[೩]

ನರ ಮೃಗಾಕಾರಿ ಹಿರಣ್ಯಕ ವೈರಿ
ಕರಿರಾಜ ರಕ್ಷಕ ಕಾರುಣ್ಯ ಮೂರ್ತಿ
ಹರಿ ಆದಿಕೇಶವ ಗುರು ಅಪ್ರಮೇಯ
ಶ್ರೀಧರ ಶೇಷಗಿರಿ ವರ ತಿಮ್ಮರಾಯ [೪]


Krupe : http://bhakthigeetha.blogspot.in/

No comments:

Post a Comment

ಕರಗಿತು ಕಂಪಿನ ಕರ್ಪೂರ... - ಮಹೇಶ ಭಟ್ಟ ಆರ್. ಹಾರ್ಯಾಡಿ

ಮೊನ್ನೆಯ ದಿನ (೧೦.೦೪.೨೬) ಬೆಳಗ್ಗೆ ನಾನು ಕಾಲೇಜಿಗೆ ಸೇರಿಕೊಂಡ ಸ್ವಲ್ಪ ಹೊತ್ತಿನಲ್ಲೇ ನನ್ನ ಶ್ರೀಮತಿ ಕರೆಮಾಡಿ 'ನಾಡೋಜ ಎಸ್. ಆರ್. ರಾಮಸ್ವಾಮಿ ಅವರು ಭೌತಿಕವಾಗಿ ...