ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Thursday, November 21, 2013

ಕೇಶವನೊಲುಮೆಯು ಆಗುವ ತನಕ

ಕೇಶವನೊಲುಮೆಯು ಆಗುವ ತನಕ
ಹರಿ ದಾಸರೊಳಿರುತಿರು ಹೇ ಮನುಜ||ಪ||

ಕ್ಲೇಶಪಾಶಂಗಳ ಹರಿದು ವಿಲಾಸದಿ
ಶ್ರೀಶನ ನುತಿಗಳ ಪೋಗಳುತ ಮನದೊಳು||ಅ.ಪ.||

ಮೋಸದಿ ಜೀವರ ಘಾಸಿ ಮಾಡಿದ ಪಾಪ ಕಾಶಿಗೆ ಹೋದರೆ ಹೋದೀತೇ
ಶ್ರೀಶನ ಭಕುತರ ದೂಷಿಸಿದ ಫಲ ಕಾಸು ಕೊಟ್ಟರೆ ಬಿಟ್ಟೀತೆ
ಭಾಷೆಯ ಕೊಟ್ಟು ನಿರಾಶೆಯ ಮಾಡಿದ ಫಲ ಕ್ಲೇಶವ ಗೊಳಿಸದೆ ಇಟ್ಟೀತೆ
ಭೂಸುರ ಸ್ವವ ಕ್ರಾಸ ಮಾಡಿದ ಫಲ ಏಸೇಸು ಜನುಮಕು ಬಿಟ್ಟೀತೆ||1||

ಜೀನನ ವಶದೊಳು ನಾನಾ ದ್ರವ್ಯವಿರೆ ದಾನ ಧರ್ಮಕೆ ಮನಸಾದೀತೇ
ಹೀನ ಮನುಜನಿಗೆ ಜ್ಞಾನವ ಭೋಧಿಸೆ ಹೀನ ವಿಷಯವಳಿ ಹೋದೀತೇ
ಮಾನಿನಿ ಮನಸು ನಿಧಾನವಿರದಿರೆ ಮಾನಾಭಿ ಮಾನಗಳು ಉಳಿದೀತೇ
ಭಾನುಪ್ರಕಾಶನ ಭಜನೆಯ ಮಾಡದ ಹೀನಗೆ ಮುಕುತಿಯು ದೊರಕೀತೆ||2||

ಕರುಣಾಮ್ರುತದಾಭರಣವ ಧರಿಸಿದ ಪರಮಗೆ ಸಿರಿಯು ತಪ್ಪೀತೆ
ಕರುಣಾ ಪಾಶದ ಉರವಣೆ ತೊರೆದಾತಗೆ ಶರಣರ ಕರುಣವು ತಪ್ಪೀತೆ
ಅರಿತು ಶಾಸ್ತ್ರವನು ಆಚರಿಪ ಯೋಗ್ಯಗೆ ಗುರು ಉಪದೇಶವು ತಪ್ಪೀತೆ
ವರವೇಲಾಪುರ ದಾದಿಕೇಶವನ ಸ್ಮರಿಸುವವನಿಗೆ ಮೋಕ್ಷ ತಪ್ಪೀತೆ||3||

Krupe : http://bhakthigeetha.blogspot.in/

No comments:

Post a Comment