Tuesday, July 22, 2014

ಸಂದರ್ಶನ - ತಾರಾ ಶೈಲೇಂದ್ರ

ತಾರಾ ಶೈಲೇಂದ್ರ ಅವರು ನಡೆಸಿದ ಜಯಂತ ಕಾಯ್ಕಿಣಿ ಅವರ ಸಂದರ್ಶನದ ಒಂದು ಆಯ್ದ ಭಾಗ. ಪೂರ್ತಿ ಓದಿಗೆ ಈ ಲಿಂಕ್ ಕ್ಲಿಕ್ಕಿಸಿ...
http://taraantaranga.blogspot.in/2014/06/blog-post.html

ಪ್ರಶ್ನೆ : ತಾವು ಮೂಲತಃ Biochemist ಆಗಿದ್ದು , ಸಾಹಿತ್ಯ ಕೃಷಿಯನ್ನು ಮುಂದುವರೆಸಿದ್ದು ಹೇಗೆ ?
ಉತ್ತರ : ವಿಜ್ಞಾನ ಹಾಗೂ ಸಾಹಿತ್ಯ ಬೇರೆ ಎಂಬ ಕಲ್ಪನೆ ತಪ್ಪು .
ಕುವೆಂಪು ಅವರು QUANTUM PHYSICS ಓದಿದವರು .
ಬೇಂದ್ರೆಯವರ ಗ್ರಂಥಾಲಯದ ೧೩,೦೦೦ ಪುಸ್ತಕಗಳಲ್ಲಿ ೧೦,೦೦೦ ವಿಜ್ಞಾನಕ್ಕೆ ಸಂಬಂಧಿಸಿದವು .
ಯಶವಂತ್ ಚಿತ್ತಾಲರು ಒಬ್ಬ Polymer Chemist.
ಪೂರ್ಣಚಂದ್ರ ತೇಜಸ್ವಿಯವರು ಒಬ್ಬ ಸಸ್ಯಶಾಸ್ತ್ರಜ್ಞರು
ಕಾರಂತರು ನಡೆದಾಡುವ ವಿಜ್ಞಾನ ವಿಶ್ವಕೋಶ ಎನಿಸಿಕೊಂಡವರು
ನಿಸಾರ್ ಅಹ್ಮದ್ ಅವರು Geologist ಆಗಿದ್ದವರು .
ನಾವು ಮಕ್ಕಳಲ್ಲಿ ವಿಜ್ಞಾನ ಓದಿದವ ಬುದ್ಧಿವಂತ , ಕಲೆ ಓದಿದವ ದಡ್ಡ ಎಂಬ ತಪ್ಪು ಅಭಿಪ್ರಾಯ ಬೆಳೆಸಿ, ದಾರಿ ತಪ್ಪಿಸಿದ್ದೇವೆ. ವಿಜ್ಞಾನ ಮತ್ತು ಕಲೆ ಎರಡೂ ಒಂದಕ್ಕೊಂದು ಪೂರಕವಾಗಿರಬೇಕು.

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......