Friday, September 5, 2014

ಕನಸು.

 ಕನಸು.*

ಬಾನಂಚಿನ ಅಂಗಳದಿ ನಾ ಕಂಡ ಆ ಕನಸು
ತಾರೆಗಳ ಆಗಸದಿ ಚಿತ್ತಾರವ ಬಿಡಿಸಿದಂತೆ
ಚಂದಿರನ ಬೆಳದಿಂಗಳಲಿ ನಾ ನಗುವ ಕಂಡೆ
ನಗುವಿನಾಳದ ನೋವ ಮರೆತು
ಮೋಡಗಳು ಬಂಧಿಸಿದ ಆ ಚಂದ್ರನ ಪರದಾಟ
ಜೀವನದಿ ಕಮರಿದ ಕನಸುಗಳ ಹುಡುಕಾಟ
ಕಪ್ಪಗಿನ ಮೋಡದ ಅಂಚಿನಲಿ ನಿಂತ ಮಳೆಯಹನಿ
ಕಣ್ಣಂಚಿನಲಿ ತುಂಬಿದ ಕಣ್ಣೀರ  ಹನಿಯ ಸಾಲು
ಮೋಡಗಳ ಪೈಪೋಟಿ ಭಾವನೆಗಳ ಮಿಡುಕಾಟ
ದೂರದಾಗಸದ ಕಡೆಗೆ ನೆಮ್ಮದಿಯ ನೋಟ.

ಸ್ಮೃತಿ..   

1 comment:

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......