Wednesday, July 15, 2015

ವೇಣಿ ಮಾಧವನ ತೋರಿಸೆ – ವಾದಿರಾಜರು

ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ
ಕಾಣದೆ ನಿಲ್ಲಲಾರೆನೆ||ಪಲ್ಲವಿ||

ಕಾಣುತ ಭಕ್ತರ ಕರುಣದಿ ಸಲಹುವ
ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ||

ಬಂದೆನೆ ಬಹಳ ದೂರದಿ ಭವಸಾಗರ ತರಣಿ
ನಿಂದೆನೆ ನಿನ್ನ ತೀರದಿ
ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ
ಮಂದಗಮನೆ ಎನ್ನ ಮುಂದಕೆ ಕರೆಯೆ ||೧||

ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು
ಕರುಣದಿಂದೆನ್ನ ಪೊರೆಯೆ
ಸ್ಮರಣೆ ಮಾತ್ರದಿ ಭವತಾಪವ ಹರಿಸುವ
ಸ್ಮರನ ಪಿತ ಮುರಹರನ ಕರುಣದಿ ||೨||

ಸುಜನರಿಗೆಲ್ಲಾಧರಳೆ ಸುಖಶೀಲೆ ಕೇಳೆ
ಕುಜನ ಸಂಗವನು ಕೀಳೆ
ನಿಜಪದವಿಯನೀವ ಹಯವದನನ
ಪದ ರಜವ ತೋರಿಸೆ ಮದಗಜಗಮನೆ ||೩||

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......