ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Friday, July 24, 2015

ಶ್ರೀ ಗಣೇಶಭಟ್ಟ ಕೊಪ್ಪಲತೋಟರ ಮೂರನೆಯ ಅಷ್ಟಾವಧಾನಕಾರ್ಯಕ್ರಕೆ ಅಮಂತ್ರಣ

ಆತ್ಮೀಯಮಿತ್ರರಿಗೆಲ್ಲ ನಮಸ್ಕಾರ,
ಇದೇ ತಿಂಗಳು ಇಪ್ಪತ್ತೈದನೆಯ ತಾರೀಖು ಶನಿವಾರದಂದು ಬೆಳಗ್ಗೆ ಹತ್ತುಗಂಟೆಗೆ ಬಸವನಗುಡಿ ರಸ್ತೆಯಲ್ಲಿರುವ ಗೋಖಲೆ ಸಾರ್ವಜನಿಕವಿಚಾರಸಂಸ್ಥೆಯಲ್ಲಿ ನಮ್ಮ ಯುವಮಿತ್ರರೂ ಸಾಹಿತ್ಯರಸಿಕರೂ ಆದ
ಶ್ರೀ ಗಣೇಶಭಟ್ಟ ಕೊಪ್ಪಲತೋಟರ ಮೂರನೆಯ ಅಷ್ಟಾವಧಾನಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದಕ್ಕೆ ಪ್ರಾಯೋಜಕರಾಗಿ ಒದಗಿ ಬಂದವರು ನಮ್ಮ ಪದ್ಯಪಾನ ಬಳಗದವರೇ ಆದ ಶ್ರೀ.ಸೋಮಶೇಖರಶರ್ಮ, ಶ್ರೀ.ರವಿಶಂಕರ್ ಮತ್ತು ಶ್ರೀ.ಶ್ರೀಧರ್ ಸಾಲಿಗ್ರಾಮ ಅವರ ಪೂಜ್ಯಮಾತಾಪಿತರು.ಇದಕ್ಕಾಗಿ ಅವರಿಗೆ ವಿಶೇಷಕೃತಜ್ಞತೆಗಳು.
ಶ್ರೀ ಗಣೇಶಭಟ್ಟ ಕೊಪ್ಪಲತೋಟ
ಈ ಅವಧಾನದಲ್ಲಿ ಪೃಚ್ಛಕರಾಗಿ ಪಾಲ್ಗೊಳ್ಳಲು ಪ್ರೀತಿಯಿಂದ ಒಪ್ಪಿದವರು :
ಶ್ರೀ. ಎಮ್ ಆರ್ ಚಂದ್ರಮೌಳಿ (ನಿಷೇಧಾಕ್ಷರಿ)
ಶ್ರೀ. ಮಂಜುನಾಥ ಕೊಳ್ಳೇಗಾಲ (ಸಮಸ್ಯಾಪೂರಣ)
ಶ್ರೀ. ಬಿ ಆರ್ ಪ್ರಭಾಕರ್ (ದತ್ತಪದೀ)
ಶ್ರೀಮತಿ. ಉಷಾ ಉಮೇಶ್ (ನ್ಯಸ್ತಾಕ್ಷರೀ)
ಶ್ರೀ. ಸುಧೀರ್ ಕೃಷ್ಣಸ್ವಾಮಿ (ಆಶುಕವಿತೆ)
ಶ್ರೀಮತಿ. ಶ್ರೀಲಲಿತಾ ರೂಪನಗುಡಿ (ಕಾವ್ಯವಾಚನ)
ಶ್ರೀ. ರಂಗನಾಥ ಪ್ರಸಾದ್ (ಸಂಖ್ಯಾಬಂಧ)
ಶ್ರೀ. ಆರ್ ಗಣೇಶ್ (ಅಪ್ರಸ್ತುತಪ್ರಸಂಗ)

ಅಷ್ಟಾವಧಾನಿ ಕೊಪ್ಪಲತೋಟರು ಕೇವಲ ಇಪ್ಪತ್ತಾರು ವರ್ಷಗಳ ಕಿರಿಯ ಹರೆಯದಲ್ಲಿಯೇ ಮಾಡಿರುವ ಸಾಹಿತ್ಯಸಾಧನೆ ಸ್ತುತ್ಯವಾಗಿದೆ. ಅವರು ಈಗಾಗಲೇ ಕಥೆ, ಕಾದಂಬರಿ, ಕವಿತೆ, ಖಂಡಕಾವ್ಯ ಮುಂತಾದ ಪ್ರಕಾರಗಳಲ್ಲಿ ದುಡಿದಿದ್ದಾರೆ. ಅಲ್ಲದೆ ಹಳಗನ್ನಡ, ನಡುಗನ್ನಡ ಮತ್ತು ಹೊಸಗನ್ನಡ ಸಾಹಿತ್ಯಗಳಲ್ಲಿ ಒಳ್ಳೆಯ ಅಧ್ಯಯನವನ್ನೂ ಮಾಡಿದ್ದಾರೆ. ಜೊತೆಗೆ ಒಳ್ಳೆಯ ಧಾರೆ, ಧಾರಣ ಮತ್ತು ಪ್ರತಿಭೆ-ಪಾಂಡಿತ್ಯಗಳ ಹದವುಳ್ಳ ತಮ್ಮ ಮೊದಲ ಅವಧಾನದ ಮೂಲಕವೇ ವಿದ್ವದ್ರಸಿಕರಲ್ಲಿ ಹೊಸಭರವಸೆಯನ್ನೂ ಮೂಡಿಸಿದ್ದಾರೆ. ಇಂಥ ಮೇಧಾವಿಗಳಾದ ತರುಣರ ವಿಶಿಷ್ಟಕಲೆಯನ್ನು ಮೆಚ್ಚಿ ಆದರಿಸಲು ಕನ್ನಡಸಾಹಿತ್ಯರಸಿಕರೂ ಅವಧಾನಕಲಾಪ್ರೇಮಿಗಳೂ ಬರಬೇಕೆಂದು ವಿನಂತಿ. ಎಲ್ಲ ಕಾವ್ಯರಸಿಕರಿಗೂ ಆದರದ ಸ್ವಾಗತ.



No comments:

Post a Comment