Saturday, September 26, 2015

ಹಾಸ್ಯ - ಕೃಪೆ - ವಾಟ್ಸ್ ಆಪ್


ಎಂಟು , ಹತ್ತು ವರುಷದ ಇಬ್ಬರು ಹುಡುಗರು ತುಂಟತನದಲ್ಲಿ ಪ್ರಖ್ಯಾತರಾಗಿದ್ದರು. ಕುಖ್ಯಾತರು ಕೂಡ. ಊರಲ್ಲಿ ಏನೇ ಕಿತಾಪತಿಯಾದರೂ ಅದರಲ್ಲಿ ಇವರಿಬ್ಬರ ಹೆಸರು ಇದ್ದೇ ಇರುತಿತ್ತು.. ಅವರ ಹೆತ್ತವರಿಗೆ ಸಹಜವಾಗಿಯೇ ಇದು ತಲೆಬಿಸಿಯ ಸಂಗತಿಯಾಗಿತ್ತು.  ಹೀಗಿರುವಾಗ ಅವರಮ್ಮನಿಗೆ ಒಬ್ಬ ಸ್ವಾಮೀಜಿಯ ಬಗ್ಗೆ ತಿಳಿದು ಬಂತು. ಅವರು ಇಂಥ ಎಷ್ಟೊ ಮಕ್ಕಳ ತಂಟತನವನ್ನು ಬುದ್ಧಿ ಹೇಳಿ ಕಡಿಮೆ ಮಾಡಿದ್ದರು. ಮಕ್ಕಳಿಬ್ಬರನ್ನೂ ಕರೆದುಕೊಂಡು ಸ್ವಾಮೀಜಿಯವರ ಬಳಿ ಹೋದಳು.
ವಿಷಯವೆಲ್ಲ ತಿಳಿದುಕೊಂಡು ಸ್ವಾಮೀಜಿ ಹೇಳಿದರು ಒಬ್ಬೊಬ್ಬರನ್ನೇ ಮಾತಾಡಿಸುತ್ತೇನೆ. ನಾಳೆ ಚಿಕ್ಕವನನ್ನು ಕಳುಹಿಸಿ ನನ್ನ ಹತ್ತಿರ.


ಸರಿ ಎಂದ ಅಮ್ಮ.. ಮಾರನೆ ದಿನ ಚಿಕ್ಕವನನ್ನು ಕಳುಹಿಸಿದರು. ಅವನನ್ನು ಸ್ವಲ್ಪ ಹೊತ್ತು ದಿಟ್ಟಿಸಿ ನೋಡಿದ ಸ್ವಾಮೀಜಿ ತಮ್ಮ ಕಂಚಿನ ಕಂಠದಿಂದ ದೇವರು ಎಲ್ಲಿದ್ದಾನೆ? ಎಂದು ಕೇಳಿದರು. ಹುಡುಗ ಮೌನವಾಗಿದ್ದ. ಪುನಃ ಹತ್ತಿರ ಬಂದು ದೇವರು ಎಲ್ಲಿದ್ದಾನೆ ಎಂದು ಕೇಳಿದರು.
ಆಗಲೂ ಮಾತಾಡದ ಹುಡುಗನ ಕೆನ್ನೆಯನ್ನು ತನ್ನ ಬೆರಳಿಂದ ತಿವಿದು ಅದೇ ಪ್ರಶ್ನೆಯನ್ನು ಕೇಳಿದರು.. ದೇವರು ಎಲ್ಲಿದ್ದಾನೆ?.
ಹುಡುಗ ಅಲ್ಲಿಂದ ಒಂದೇ ಉಸಿರಿಗೆ ಓಡಿ ಬಂದು ಮನೆ ಸೇರಿ ಮೂಲೆಯೊಂದರಲ್ಲಿ ಅಡಗಿ ಕೂತ.
ಅದನ್ನು ಕಂಡ ದೊಡ್ಡ ಹುಡುಗ ಹತ್ತಿರ ಬಂದು ಏನಾಯ್ತು ಎಂದು ಕೇಳಿದ.
ಚಿಕ್ಕವನು ನಡುಗುತ್ತ... ಅಣ್ಣಾ.... ಎಂದು ಅವನ ಕಿವಿಯಲ್ಲಿ ಗುಟ್ಟಾಗಿ ಹೇಳಿದ..
ಆ ಪುಟ್ಟ ಹುಡುಗನ ಉತ್ತರ ಅದೆಷ್ಟು ಮುಗ್ಧವಾಗಿತ್ತೆಂದರೆ ನನಗಂತೂ ನಗು ತಡೆಯಲೇ ಆಗಲಿಲ್ಲ..
ನೀವೂ ಓದಿ.
.
.
.
.
"ಅಣ್ಣಾ...ಈ ಸಲ ದೊಡ್ಡ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೇವೆ ಕಣೊ... ದೇವರು ಕಾಣೆಯಾಗಿದ್ದಾನಂತೆ .. ಅದೂ ನಮ್ಮ ಮೇಲೆ ಬಂದಿದೆ."


ಕೃಪೆ - ವಾಟ್ಸ್ ಆಪ್

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...