ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Tuesday, October 27, 2015
Monday, October 26, 2015
ಚುಟುಕ - ಸಂತೋಷ್ ಕುಮಾರ್ ಎಲ್. ಎಂ.
---1 ---
ಬತ್ತಿಯ ಬಾಯಿಗೆ
ಬೆಂಕಿಯಿಟ್ಟವನ ಆಶಯ
ಬೆಳಕಷ್ಟೇ!
ಮುಗಿಯುವ
ಅದರ ಆಯಸ್ಸಲ್ಲ
---2---------
ಗೂಡು ಕಟ್ಟಿದ್ದ ಮರವ
ಧರೆಗುರುಳಿಸಿದ ಕಾರಣ
ಹುಡುಕುತ್ತಿದ್ದ ಹಕ್ಕಿಗೆ
ವಿಳಾಸವಿಲ್ಲ...
ಹಕ್ಕಿಯೂ ಶಪಿಸಿತು,
ಉರುಳಿಸಿದ ದುರುಳನಿಗೂ
ಮುಂದೊಂದು ದಿನ
ವಿಳಾಸವಿಲ್ಲ!
ಬತ್ತಿಯ ಬಾಯಿಗೆ
ಬೆಂಕಿಯಿಟ್ಟವನ ಆಶಯ
ಬೆಳಕಷ್ಟೇ!
ಮುಗಿಯುವ
ಅದರ ಆಯಸ್ಸಲ್ಲ
---2---------
ಗೂಡು ಕಟ್ಟಿದ್ದ ಮರವ
ಧರೆಗುರುಳಿಸಿದ ಕಾರಣ
ಹುಡುಕುತ್ತಿದ್ದ ಹಕ್ಕಿಗೆ
ವಿಳಾಸವಿಲ್ಲ...
ಹಕ್ಕಿಯೂ ಶಪಿಸಿತು,
ಉರುಳಿಸಿದ ದುರುಳನಿಗೂ
ಮುಂದೊಂದು ದಿನ
ವಿಳಾಸವಿಲ್ಲ!
ಅತೀ ಎತ್ತರದ ಕಟ್ಟಡಗಳ ಮೇಲೆ ಹಗ್ಗ ಕಟ್ಟಿ ನಡೆದ - Philippe Petit
ಚಿಕ್ಕವನಿದ್ದಾಗ ಫ್ರಾನ್ಸಿನ ಬೀದಿಗಳಲ್ಲಿ ತಿರುಗುತ್ತ, ಜನಗಳು ಅಚ್ಚರಿಪಡುವ ಪುಟ್ಟ ಪುಟ್ಟ ಸಾಹಸ ಪ್ರದರ್ಶನಗಳನ್ನು ನೀಡುತ್ತ ಸಂಪಾದಿಸುವ ಹುಡುಗ Philippe Petit. ಇದರ ಬಗ್ಗೆ ಅವರ ಅಪ್ಪ ಅಮ್ಮನಿಗೆ ಕೊಂಚವೂ ಇಷ್ಟವಿರುವುದಿಲ್ಲ. ಸರ್ಕಸ್ಸೊಂದರಲ್ಲಿ ಹಗ್ಗದ ಮೇಲೆ ನಡೆಯುವ ಸರ್ಕಸ್ಸಿನವನೊಬ್ಬನ ಕೌಶಲ್ಯದಿಂದ ಪ್ರೇರಿತನಾಗುವ Philippe Petitಗೆ ಮುಂದೆ ತಾನೂ ಈ ಸಾಹಸವನ್ನು ಮಾಡಬೇಕೆಂಬ ಆಸೆಯಾಗುತ್ತದೆ. ಅದನ್ನು ಕಲಿಯುತ್ತ ಸಾಗುವ ಹಾದಿಯಲ್ಲಿ ಆತ ಹಗ್ಗ ಕಟ್ಟಿ ಮಧ್ಯೆ ನಡೆಯಲು ಅನುಕೂಲವಾಗಬಲ್ಲ ಎರಡು ಎತ್ತರದ ವಸ್ತುಗಳನ್ನು ಸದಾ ಹುಡುಕುತ್ತಿರುತ್ತಾನೆ.
ಯಾವುದೋ ಒಂದು ದೃಶ್ಯದಲ್ಲಿ ಹಲ್ಲು ನೋವಾಗಿ Dental Clinic ಗೆ ಹೋದಾಗ, ಅಲ್ಲಿಟ್ಟ ಮ್ಯಾಗಜೈನುಗಳ ಪೈಕಿ ಒಂದರಲ್ಲಿ ಪ್ರಪಂಚದ ಅತೀ ಎತ್ತರದ ಕಟ್ಟಡ ನ್ಯೂಯಾರ್ಕಿನ WTCಯ ಬಗೆಗಿನ ಮಾಹಿತಿ ಇವನ ಕಣ್ಣಿಗೆ ಬೀಳುತ್ತದೆ. ಕೇವಲ ಅದರ ಚಿತ್ರ ನೋಡಿಯೇ ರೋಮಾಂಚನಗೊಂಡು, ಜೀವನದಲ್ಲೊಮ್ಮೆ ತಾನು ಆ ಜೋಡಿ ಕಟ್ಟಡಗಳ ಮಧ್ಯೆ ಹಗ್ಗ ಕಟ್ಟಿ ನಡೆಯಬೇಕೆಂಬ ಮಹದಾಶೆ ಆ ಕ್ಷಣದಲ್ಲೇ ಅವನೆದೆಯೊಳಗೆ ಚಿಗುರೊಡೆಯುತ್ತದೆ. ಇಂಟರ್ನೆಟ್ಟುಗಳಿಲ್ಲದ ಎಪ್ಪತ್ತರ ದಶಕಗಳಲ್ಲಿ ಕೇವಲ ಪುಸ್ತಕಗಳಲ್ಲಿ, ವೃತ್ತಪತ್ರಿಕೆಗಳಲ್ಲಿ ಬರುವ ಆ ಕಟ್ಟಡದ ಬಗೆಗಿನ ಮಾಹಿತಿಯನ್ನು ಸಂಗ್ರಹಿಸುತ್ತ ತಯಾರಿ ಶುರುವಿಟ್ಟುಕೊಳ್ಳುತ್ತಾನೆ.

ಇದು ಕಾಲ್ಪನಿಕ ಕಥೆಯಲ್ಲ. ಅತೀ ಎತ್ತರದ ಕಟ್ಟಡಗಳ ಮೇಲೆ ಹಗ್ಗ ಕಟ್ಟಿ ನಡೆದು ಪ್ರಸಿದ್ಧಿಯಾದ ವ್ಯಕ್ತಿ Philippe Petit, ತಮ್ಮ ಅನುಭವವನ್ನು "To Reach the Clouds" ಅನ್ನುವ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಅದೇ ಪುಸ್ತಕವನ್ನಾಧರಿಸಿ "The Walk" ಚಿತ್ರವನ್ನು ತಯಾರಿಸಲಾಗಿದೆ. ಅವಕಾಶ ಸಿಕ್ಕರೆ ನೀವೂ ಒಮ್ಮೆ ಚಿತ್ರಮಂದಿರದಲ್ಲಿ ನೋಡಿ.
![]() |
ಸಂತೋಷ್ ಕುಮಾರ್ ಎಲ್. ಎಂ. |
Subscribe to:
Posts (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...