ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Wednesday, November 18, 2015

ಹಗಲಲ್ಲದ ಇರುಳಲ್ಲದ ನಡುಗಾಲದ - ರಾಜೇಂದ್ರ ಪ್ರಸಾದ್

ಹಗಲಲ್ಲದ ಇರುಳಲ್ಲದ ನಡುಗಾಲದ
ನೆತ್ತಿಯ ಮೇಲೆ ಎಷ್ಟೊಂದು ಉರಿದೀಪ
ಎದೆಯ ಮೇಲೆ ತೇಲಿ ಬಿಟ್ಟಂತೆ!
ಎತ್ತ ನೋಡಿದರತ್ತ ಸಾವಿನ ದೋಣಿಗಳು
ನನ್ನನೇ ಅಟ್ಟಿಸಿಕೊಂಡು ಬಂದಂತೆ
ಬಿಡಿದೆ ಬಾಗಿಲವರೆಗೆ ಬಂದು ಅಲ್ಲಿಯೇ ಕಾಯ್ದಂತೆ
ರುಂಡವಿಲ್ಲದ ಹಾರುಪಕ್ಷಿಗಳು ಯಮಪಾಶವ
ಹಿಡಿದು ಮನೆಯ ಮೇಲಣ ಮುಗಿಲೆಲ್ಲಾ ಸುತ್ತಿದಂತೆ.
ದೇಹ ಬೆವರುತ್ತಿದೆ ಬಿಸಿಹಬೆಯಂತೆ.
ಹನುಮಾss ಇಟ್ಟು ಮರೆತ ಸಂಜೀವಿನಿ ಎಲ್ಲೋ ?
ಮರೆತದ್ದು ಮಣ್ಣಾಗಲಿ ಚಮ್ಮಾರನ ಮನೆಯ
ಗಲ್ಲೇಬಾನಿಯನಾದರೂ ಮೊಗೆದು ತಾರೋ ಸಂಜೀವರಾಯ
ನಿನ್ನ ಮನೆಕಾಯ, ಉಸಿರು ಸಿಕ್ಕಿಕೊಂಡಿದೆ.
ಬಾಗಿಲಲ್ಲಿ ದೋಣಿ
ಮುಗಿಲಲ್ಲಿ ಪಕ್ಷಿ
ಎದೆಯಲ್ಲಿ ದೀಪ
ನನ್ನ ಕಾಯುತ್ತಿವೆ. ~

                                                -    ರಾಜೇಂದ್ರ ಪ್ರಸಾದ್

No comments:

Post a Comment